ಸೋಮವಾರ, ಜೂನ್ 23, 2025
HomeBreakingವಿದ್ಯುತ್‌ ಬಿಲ್ ಪಾವತಿಸದ ಮಾಜಿ ಸಚಿವ ಖಾದರ್ ಆಪ್ತ : ಕೇಳಲು‌ ಹೋದ ಮೆಸ್ಕಾಂ ಸಿಬ್ಬಂದಿ...

ವಿದ್ಯುತ್‌ ಬಿಲ್ ಪಾವತಿಸದ ಮಾಜಿ ಸಚಿವ ಖಾದರ್ ಆಪ್ತ : ಕೇಳಲು‌ ಹೋದ ಮೆಸ್ಕಾಂ ಸಿಬ್ಬಂದಿ ಮೇಲೆಯೇ ಹಲ್ಲೆ

- Advertisement -

ಮಂಗಳೂರು : ವಿದ್ಯುತ್ ಬಿಲ್ ಪಾವತಿ ಮಾಡದೇ ಇದ್ದುದನ್ನು ಕೇಳಲು ಹೋದ ಮೆಸ್ಕಾಂ ಸಿಬಂದಿಗೆ ಮಾಜಿ ಸಚಿವ ಯು.ಟಿ ಖಾದರ್ ಆಪ್ತ , ಕಾಂಗ್ರೆಸ್ ಮುಖಂಡ ಅಮಿರ್ ತುಂಬೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

Ameen Complaint

ಮಂಗಳೂರು ಹೊರವಲಯದ ದೇರಳಕಟ್ಟೆ ಬಳಿ ಅಮಿರ್ ತುಂಬೆ ಮನೆಯಿದ್ದು ಬಿಲ್ ಪಾವತಿ ಮಾಡದೇ ಇದ್ದ ವಿಚಾರದಲ್ಲಿ ಲೈನ್ ಮ್ಯಾನ್ ಫ್ಯೂಸ್ ತೆಗೆಯಲು ಮುಂದಾಗಿದ್ದರು. ಇದರಿಂದ ರೊಚ್ಚಿಗೆದ್ದ ಅಮಿರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ. ಮನೆಗೆ ಬಂದಿದ್ದ ಇಬ್ಬರು ಸಿಬಂದಿಗೂ ಹಲ್ಲೆ ಮಾಡಿದ್ದಲ್ಲದೆ ಕುತ್ತಿಗೆ ಹಿಡಿದು ಹೊರಕ್ಕೆ ದೂಡಿದ್ದಾನೆ. ಕಾಂಗ್ರೆಸ್ ಮುಖಂಡನ ರೌಡಿಸಂ ಬಗ್ಗೆ ಹಲ್ಲೆಗೊಳಗಾದ ಸಿಬಂದಿ ಮಧು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.

width="560" height="315" frameborder="0" allowfullscreen="allowfullscreen">

width="560" height="315" frameborder="0" allowfullscreen="allowfullscreen">

ತಾನು ಸಚಿವರ ಆಪ್ತನೆಂಬ ಕಾರಣಕ್ಕೆ ರೌಡಿಸಂ ತೋರಿದ್ದಾನೆ ಎನ್ನಲಾಗುತ್ತಿದ್ದು ಅಮಿರ್ ತುಂಬೆ ಹಲ್ಲೆ ಮಾಡಿದ ದೃಶ್ಯ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ. ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸಿದ ಗುಂಪಿನಲ್ಲಿ ಮುಂಚೂಣಿಯಲ್ಲಿದ್ದ ಅಮೀರ್, ಅದೇ ಗುಂಗಿನಲ್ಲಿದ್ದು ಮುಸ್ಲಿಂ ಅನ್ನುವ ಕಾರಣಕ್ಕೆ ಮೆಸ್ಕಾಂ ಲೈನ್ ಮ್ಯಾನ್ ತನ್ನನ್ನು ಟಾರ್ಗೆಟ್ ಮಾಡಿದ್ದಾರೆಂದು ಹಲ್ಲೆ ನಡೆಸಿದ್ದಾನೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Ameen Complaint1

Ameen Complaint2

Ameen Complaint3

Arun Gundmi | ಅರುಣ್ ಗುಂಡ್ಮಿ
Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular