ಕಡಲತಡಿಯಲ್ಲಿಂದು ಮೊಳಗಲಿದೆ ಪೌರತ್ವದ ಕಹಳೆ, ಬಾಗಿಯಾಗ್ತಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

0

ಮಂಗಳೂರು : ಕಡಲತಡಿ ಬಂದರು ನಗರಿಯಲ್ಲಿಂದು ಪೌರತ್ವಪರ ಜನಜಾಗೃತಿ ಸಮಾವೇಶ ನಡೆಯಲಿದೆ. ಮಂಗಳೂರು ಹೊರವಲಯದ ಬಂಗ್ರಕೂಳೂರಿನಲ್ಲಿರೋ ಗೋಲ್ಡನ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರೋ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಬಾಗಿಯಾಗಲಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನರನ್ನು ಕರೆತರಲು ಸುಮಾರು 800 ಬಸ್ ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಮಾವೇಶದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದು, ಉಡುಪಿ ಮತ್ತು ಮಂಗಳೂರು ನಡುವಿನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ಮಾಡಲಾಗಿದೆ.

Leave A Reply

Your email address will not be published.