ಭಾನುವಾರ, ಏಪ್ರಿಲ್ 27, 2025
HomeBreakingಕೊನೆಗೂ ಈಡೇರಿತು ಕರಾವಳಿಗರ ದಶಕದ ಬೇಡಿಕೆ : ಪಂಪ್ ವೆಲ್ ಪ್ಲೈಓವರ್ ಉದ್ಘಾಟನೆ

ಕೊನೆಗೂ ಈಡೇರಿತು ಕರಾವಳಿಗರ ದಶಕದ ಬೇಡಿಕೆ : ಪಂಪ್ ವೆಲ್ ಪ್ಲೈಓವರ್ ಉದ್ಘಾಟನೆ

- Advertisement -

ಮಂಗಳೂರು : ಕಳೆದೊಂದು ದಶಕಗಳಿಂದಲೂ ಕರಾವಳಿಗರು ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಾದು ಹೋಗಿರೋ ಪಂಪ್ ವೆಲ್ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಅವರು ಪ್ಲೈಓವರ್ ಉದ್ಘಾಟಿಸಿದರು.  2010ರಲ್ಲಿ ಪಂಪ್ ವೆಲ್ ಪ್ಲೈಓವರ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಕಾಮಗಾರಿ ಕುಟುಂತ್ತಾ ಸಾಗಿತ್ತು. ಹೀಗಾಗಿ ಸಾರ್ವಜನಿಕರು, ವಾಹನ ಸವಾರರು ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದರು. ಹಲವು ಬಾರಿ ಹೋರಾಟಗಳು ನಡೆದಿದ್ದದವು. ಸಂಸದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗಿತ್ತು.ಇದರ ಬೆನ್ನಲ್ಲೇ ಸಂಸದ ನಳಿನ್ ಕುಮಾರ್ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದರು. ಪ್ಲೈಓವರ್ ಕಾಮಗಾರಿಯ ಹೊಣೆಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಿದ್ದರು. ಇದರ ಫಲವಾಗಿಯೇ ಪ್ಲೈಓವರ್ ಕಾಮಗಾರಿ ಚುರುಕಿನಿಂದ ನಡೆದಿದ್ದು, ಇಂದು ಪಂಪ್ ವೆಲ್ ಪ್ಲೈ ಓವರ್ ಉದ್ಘಾಟನೆಗೊಂಡಿದೆ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular