ಸಚಿವರಿಗೆ ಯಡಿಯೂರಪ್ಪ ಟಾರ್ಗೆಟ್ ! 6 ಮಂದಿಗೆ ಕೈತಪ್ಪುತ್ತೆ ಸಚಿವ ಸ್ಥಾನ

0

ಬೆಂಗಳೂರು : ಕೆಲಸ ಮಾಡಿ ಇಲ್ಲಾ ಸಚಿವ ಸ್ಥಾನ ಕಳೆದುಕೊಳ್ಳಿ. ಹೀಗಂತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಲಿ ಸಚಿವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಸಚಿವರಿಗೆ ಕೆಲವೊಂದು ಕಿವಿಮಾತು ಹೇಳಿದ್ದಾರೆ. ಯಾವುದೇ ಸಂದರ್ಭದಲ್ಲಿಯೂ ಸಚಿವ ಸಂಪುಟ ವಿಸ್ತರಣೆಯಾಗಬಹುದು. ಸಚಿವ ಸಂಪುಟಕ್ಕೆ ಬಿಜೆಪಿಯ ಕೆಲಸ ಶಾಸಕರಿಗೆ, ಪಕ್ಷಾಂತರ ಮಾಡಿದ ಶಾಸಕರಿಗೆ ಸಚಿವ ಸ್ಥಾನ ನೀಡಲು ಅಮಿತ್ ಶಾ ಸೂಚನೆಯನ್ನು ಕೊಟ್ಟಿದ್ದಾರೆ. ಹೀಗಾಗಿ ಸಂಪುಟದಲ್ಲಿರುವ 5 ರಿಂದ 6 ಮಂದಿ ಸಚಿವರನ್ನು ಕೈಬಿಡಬೇಕಾಗುತ್ತದೆ. ಹೀಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ, ಇಲ್ಲವಾದ್ರೆ ಸಚಿವ ಸಂಪುಟದಿಂದ ಕೈಬಿಡುತ್ತೇವೆ ಅಂತಾ ಯಡಿಯೂರಪ್ಪ ಎಚ್ಚರಿಕೆಯನ್ನು ರವಾನಿಸಿದ್ದಾರೆ.

Leave A Reply

Your email address will not be published.