ಕೋಟದಲ್ಲಿ ಅಪಘಾತ ಯುವತಿ ಸಾವು, ಇನ್ನೋರ್ವ ಯುವತಿ ಗಂಭೀರ

ಕೋಟ : ಫಾರ್ಚೂನರ್ ಕಾರು ಹಾಗೂ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಯುವತಿಯೋರ್ವಳು ಸಾವನ್ನಪ್ಪಿ, ಮತ್ತೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟದಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕೋಟ ಸಮೀಪದ ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24 ವರ್ಷ) ಎಂಬಾಕೆಯೇ ಸಾವನ್ನಪ್ಪಿದ ದುರ್ದೈವಿ. ಉಜಿರೆ ಮೂಲದ ಪ್ರಜ್ಞಾ (25 ವರ್ಷ) ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶ್ರೇಯಾ ತನ್ನ ಸ್ನೇಹಿತೆಯ ಜೊತೆಯಲ್ಲಿ ಕುಂದಾಪುರದಿಂದ ಬ್ರಹ್ಮಾವರದ ಕಡೆಗೆ ಸ್ಕೂಟಿಯಲ್ಲಿ ಬರುತ್ತಿದ್ದಾಗ ಹೆದ್ದಾರಿ 66ರ ಕೋಟ ಸಮೀಪದ ಕೃಷ್ಣಭವನ ಹೋಟೆಲ್ ಬಳಿ ಬರುತ್ತಿದ್ದಂತೆಯೇ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಫಾರ್ಚೂನರ್ ಕಾರು ಢಿಕ್ಕಿ ಹೊಡೆದಿದೆ.

ಇಬ್ಬರೂ ರಸ್ತೆ ಬಿದ್ದು ಒದ್ದಾಡುತ್ತಿದ್ದರು. ಆದರೆ ಅಪಘಾತ ನಡೆಯುತ್ತಿದ್ದಂತೆ ಕಾರು ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಕೋಟದ ಜೀವನ್ ಮಿತ್ರ ಆ್ಯಂಬುಲೆನ್ಸ್ ಮಾಲೀಕರಾದ ನಾಗರಾಜ್ ಪುತ್ರನ್ ಅವರ ಸಮಯ ಪ್ರಜ್ಞೆಯಿಂದ ಸಾಸ್ತಾನ ಟೋಲ್ ಬಳಿ ವಾಹನ ತಡೆದು ಕೋಟ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಕೋಟ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.