ಖ್ಯಾತ ಜ್ಯೋತಿಷಿ ಆನಂದ ಗುರೂಜಿಗೆ ಬೆದರಿಕೆ

0


ಬೆಂಗಳೂರು : ಖ್ಯಾತ ಜ್ಯೋತಿಷಿ ಆನಂದ ಗುರೂಜಿಯವರಿಗೆ ಬೆದರಿಕೆ ಪತ್ರವೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ಆನಂದ ಗುರೂಜಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಭದ್ರತೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಧರ್ಮ, ಸಂಸ್ಕೃತಿ ಹಾಗೂ ಗೋವುಗಳ ಬಗ್ಗೆ ಹೆಚ್ಚಾಗಿ ಮಾತನಾಡುತ್ತೀರಿ, ಬಹಳ ಓಡಾಡುತ್ತಿರುತ್ತೀರಿ ಎಚ್ಚರವಾಗಿರಿ ಅಂತಾ ಅನಾಮಧೇಯರು ಆನಂದ ಗೂರೂಜಿ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ಕುರಿತು ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದು, ಭದ್ರತೆಗೆ ನೀಡುವಂತೆ ಕೇಳಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಗೃಹ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ. ಹಲವು ವರ್ಷಗಳಿಂದಲೂ ಆನಂದ ಗುರೂಜಿ ಅವರಿಗೆ ಅನಾಮಧೇಯರಿಂದ ಬೆದರಿಕೆಗಳು ಬರುತ್ತಲೇ ಇದೆ ಎಂದು ಆನಂದ ಗುರೂಜಿ ತಿಳಿಸಿದ್ದಾರೆ.

Leave A Reply

Your email address will not be published.