
ತಮಿಳುನಾಡು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಪರಾಧಿಗಳಿಗೆ ನಡುಕ ಹುಟ್ಟಿಸುತ್ತಿದ್ದ ಕರ್ನಾಟಕದ ಸಿಂಗಂ ಇದೀಗ ರಾಜಕೀಯಕ್ಕೆ ಎಂಟ್ರಿಕೊಡ್ತಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಅಧಿಕೃತವಾಗಿ ಅಣ್ಣಾ ಮಲೈ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಸುಮಾರು 10 ವರ್ಷಗಳ ಕಾಲ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಯಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಹಲವು ಅಪರಾಧ ಕೃತ್ಯಗಳನ್ನು ಮಟ್ಟಹಾಕಿದ್ದಾರೆ. ವಿರೋಧಿಗಳಿಗೆ ನಡುಕವನ್ನು ಹುಟ್ಟಿಸುತ್ತಿದ್ದ ಅಣ್ಣಾಮಲೈ ಬೆಂಗಳೂರಿನಲ್ಲಿ ಡಿಸಿಪಿಯಾಗಿದ್ದ ವೇಳೆಯಲ್ಲಿ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದರು.

ಅಣ್ಣಾಮಲೈ ರಾಜೀನಾಮೆಯ ಬೆನ್ನಲ್ಲೇ ರಾಜಕೀಯಕ್ಕೆ ಎಂಟ್ರಿಕೊಡ್ತಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದ್ದವು. ಆದ್ರೆ ಅಣ್ಣಾಮಲೈ ಎಲ್ಲವನ್ನೂ ಅಲೆಗಳೆದಿದ್ದರು. ಆದ್ರೀಗ ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಈ ಹಿಂದೆಯೇ ಕರ್ನಾಟಕದ ರಾಜ್ಯ ಪೊಲೀಸ್ ಇಲಾಖೆಗೆ ರಾಜೀನಾಮೆಯನ್ನು ನೀಡಿದ್ದೇನೆ. ತನ್ನೂರಾಗಿರುವ ಕೊಯಮತ್ತೂರು ವಿಧಾನಸಭಾ ಕ್ಷೇತ್ರದಿಂದಲೇ ರಾಜಕೀಯ ಧುಮುಕಲಿದ್ದು, ಜನರ ಸೇವೆಯನ್ನು ಮಾಡಲಿದ್ದೇನೆ. ಕುಟುಂಬದೊಂದಿಗೆ ಕಾಲಕಳೆಯುವುದರ ಜೊತೆಗೆ ರಾಜಕೀಯ ಕ್ಷೇತ್ರದಲ್ಲಿಯೂ ತನ್ನನ್ನು ತೊಡಗಿಸಿಕೊಳ್ಳಲಿದ್ದೇನೆ. ರಾಜಕೀಯಕ್ಕೆ ಧುಮುಕುವ ಮೂಲಕ ಪೊಲೀಸ್ ಅಧಿಕಾರಿಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ರಾಜಕೀಯ ಕಾರ್ಯ ಮಾಡಬೇಕಿದೆ ಎಂದು ಹೇಳಿದ್ದಾರೆ.

ದಕ್ಷ ಅಧಿಕಾರಿಯೆನಿಸಿಕೊಂಡಿದ್ದ ಅಣ್ಣಾಮಲೈ ರಾಜೀನಾಮೆ ನೀಡಿದಾಗ ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಅಣ್ಣಾಮಲೈ 2019ರ ಮೇ 28ರಂದು ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆಯನ್ನು ಸಲ್ಲಸಿದ್ದರು. ಪತ್ರವ್ಯವಹಾರ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ನಡೆದಿದ್ದರೂ ಕೂಡ ಕೇಂದ್ರ ಸರಕಾರ ಅವರ ರಾಜೀನಾಮೆಯನ್ನು ಅಂಗೀಕರಿಸಲು ಹಲವು ತಿಂಗಳುಗಳನ್ನು ತೆಗೆದುಕೊಂಡಿತ್ತು. ಕರ್ನಾಟಕದಲ್ಲಿ ಹಲವು ಘಟನೆಗಳು ನಡೆದಾಗಲೂ ಅಣ್ಣಾಮಲೈ ನೆನೆಪಿಗೆ ಬರುತ್ತಿದ್ದರು.

ಪೊಲೀಸ್ ಇಲಾಖೆಗೆ ರಾಜೀನಾಮೆಯನ್ನು ನೀಡಿದ ಮೇಲೆಯೂ ಅಣ್ಣಾಮಲೈ ಸೋಶಿಯಲ್ ಮೀಡಿಯಾದ ಮೂಲಕ ಜನರಿಗೆ ಹತ್ತಿರವಾಗಿದ್ದರು. ಯುವಜನರಿಗೆ ಸ್ಪೂರ್ತಿಯನ್ನು ತುಂಬಿವ ಕಾರ್ಯವನ್ನು ಮಾಡುತ್ತಿದ್ದಾರೆ. ಅಲ್ಲದೇ ಸಾಮಾಜಿಕ ಕಾರ್ಯಗಳಲ್ಲಿಯೂ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ. ಇದೀಗ ಸಚಿವ ಡಾ.ಡಿ.ಸುಧಾಕರ್ ಅವರೇ ಈ ಕುರಿತು ಟ್ವೀಟ್ ಮಾಡಿದ್ದಾರೆ.
