ಅನುದಾನಿತ ಪದವಿ ಉಪನ್ಯಾಸಕ ನೇಮಕಾತಿ : ಗುಡ್ ನ್ಯೂಸ್ ಕೊಟ್ಟ ಸರಕಾರ

ಬೆಂಗಳೂರು : ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.

ಶಾಸಕ ಮಹೇಶ್ ಅವರ ನೇತೃತ್ವದಲ್ಲಿ ಅನುದಾನಿತ ಕಾಲೇಜುಗಳು ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಯನ್ನು ತೋಡಿಕೊಂಡಿದ್ದಾರೆ.

ಈ ವೇಳೆ ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಅಲ್ಲದೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಅಶ್ವತ್ಥನಾರಾಯಣ ಆದೇಶಿಸಿದ್ದಾರೆ.

Comments are closed.