ಭಾನುವಾರ, ಜೂನ್ 15, 2025
HomeBreakingಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಗೆ ಬೆದರಿಕೆ : ಇಬ್ಬರ ಬಂಧನ

ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಗೆ ಬೆದರಿಕೆ : ಇಬ್ಬರ ಬಂಧನ

- Advertisement -

ಬಂಟ್ವಾಳ : ಹೋಮ್ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯ ಮಾಹಿತಿ ಸಂಗ್ರಹಿಸಿದ ಕಾರಣಕ್ಕೆ ಆಶಾ ಕಾರ್ಯಕರ್ತೆಗೆ ಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಿನ್ನಿಬೆಟ್ಟುವಿನಲ್ಲಿ ಈ ಘಟನೆ ನಡೆದಿದ್ದು, ಮಾರಪ್ಪ ಹಾಗೂ ಉಮೇಶ್ ಬಂಧಿತ ಆರೋಪಿಗಳು. ಇತ್ತೀಚಿಗಷ್ಟೇ ವಿದೇಶದಿಂದ ಬಂದಿದ್ದ ನಿತೇಶ್ ಎಂಬಾತನನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಈ ಬಗ್ಗೆ ಆಶಾ ಕಾರ್ಯಕರ್ತೆಯಾಗಿರುವ ತುಳಸಿ ಅವರು ನಿತ್ಯವೂ ಮಾಹಿತಿಯನ್ನು ಸಂಗ್ರಹಿಸುತ್ತಿದ್ದರು. ಇದರಿಂದ ಕೆರಳಿದ್ದ ಉಮೇಶ್ ಹಾಗೂ ಮಾರಪ್ಪ ಎಂಬವರು ಆಶಾ ಕಾರ್ಯಕರ್ತೆ ತುಳಸಿ ಎಂಬವರಿಗೆ ಕರೆ ಮಾಡಿ ಬೆದರಿಕೆಯೊಡ್ಡಿದ್ದಾರೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular