ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಇಂದು ಮುಹೂರ್ತ !

0

ನವದೆಹಲಿ : ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿಬಂದಿದೆ. ರಾಮಮಂದಿರ ನಿರ್ಮಾಣಕ್ಕಾಗಿ ಆರಂಭಿಸಿರೋ ಟ್ರಸ್ಟ್ ನ ಕಾರ್ಯಗಳಿಗೆ ಚಾಲನೆ ದೊರೆಯಲಿದೆ.

ರಾಮಮಂದಿರ ನಿರ್ಮಾಣದ ಉಸ್ತುವಾರಿಗಾಗಿ ರಚನೆಯಾಗಲಿರೋ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆ ಇಂದು ಸಂಜೆ 5 ಗಂಟೆಗೆ ನಡೆಯಲಿದ್ದು, ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪಾಲ್ಗೊಳ್ಳಲಿದ್ದಾರೆ.

ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆ ಟ್ರಸ್ಟ್ ನೋಂದಣಿಯಾಗಿರುವ ಟ್ರಸ್ಟ್ ಸದಸ್ಯ ಕೆ.ಪರಾಶರನ್ ಅವರ ನಿವಾಸದಲ್ಲಿಯೇ ನಡೆಯಲಿದೆ. ಇಂದು ನಡೆಯಲಿರುವ ಸಭೆ ಅತ್ಯಂತ ಮಹತ್ವದ್ದಾಗಿದ್ದು, ರಾಮಮಂದಿರ ನಿರ್ಮಾಣದ ರೂಪುರೇಷೆಗಳ ಬಗ್ಗೆ ಚರ್ಚೆಯಾಗಲಿದೆ. ರಾಮನವಮಿಯ ದಿನವಾದ ಎಪ್ರಿಲ್ 2 ರಂದು ಮಂದಿರ ನಿರ್ಮಾಣಕ್ಕೆ ಚಾಲನೆ ನೀಡುವ ಕುರಿತು ಚರ್ಚೆ ನಡೆಯಲಿದೆ.

Leave A Reply

Your email address will not be published.