ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ, ನಟಿ ಜಯಶ್ರೀ ಆತ್ಮಹತ್ಯೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಜಯಶ್ರೀ ಮನೆಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ ಆಗ ಸ್ನೇಹಿತರು ಜಯಶ್ರೀ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಹೀಗಾಗಿ ಬದುಕಿ ಉಳಿದಿದ್ದರು. ಆದ್ರೀಗ ಆತ್ಮಹತ್ಯೆ ಮಾಡಿಕೊಂಡು ನೇಣಿಗೆ ಶರಣಾಗಿದ್ದಾರೆ.

‘ಖಿನ್ನತೆಗೆ ಹಾಗೂ ಈ ಜಗತ್ತಿಗೆ ವಿದಾಯ ಹೇಳುತ್ತಿದ್ದೇನೆ” ಎಂದು ಜಯಶ್ರೀ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೇ ತದನಂತರದಲ್ಲಿ ಆ ಪೋಸ್ಟ್ ಡಿಲೀಟ್ ಮಾಡಿ ತಾನು ಆರಾಮಾಗಿದ್ದೇನೆ ಎಂದು ಮತ್ತೆ ಪೋಸ್ಟ್ ಮಾಡಿದ್ದರು.

ಫೇಸ್ ಬುಕ್ ನಲ್ಲಿ ತನಗೆ ಬರೆದಿರುವ ಕಮೆಂಟ್ಸ್ ನಲ್ಲಿ ತುಂಬಾ ಕೆಟ್ಟದಾಗಿ ಬರೆದಿದ್ದಾರೆ. ಆದರೆ ನಾನು ಮಾತನಾಡಲು ಇಷ್ಟಪಡುವುದಿಲ್ಲ. ನಾನೊಬ್ಬಳು ಲೂಸರ್, ನಾನು ಹುಚ್ಚಿ, ನಾನು ಸಾಯಬೇಕು ಎಂದುಕೊಂಡಿದ್ದೇನೆ. ನಾನು ಬಯಸುತ್ತಿರುವುದು ಒಂದೇ ನನ್ನ ಸಾವು. ಹೀಗಾಗಿ ನನಗೆ ದಯಾಮರಣ ನೀಡಿದರೆ ಸಾಕು. ನಾನು ಆರಾಮಾಗಿ ಇರುತ್ತೇನೆ. ನನಗೆ ದಯಾಮರಣ ನೀಡಿ. ನಾನು ಒಳ್ಳೆಯ ಹುಡುಗಿ ಅಲ್ಲ. ಪ್ಲೀಸ್ ಪ್ಲೀಸ್ ಎಂದು ಅವರು ಕಣ್ಣೀರಿಟ್ಟಿದ್ದರು. ನಂತರ ಈ ವಿಡಿಯೋವನ್ನು ಜಯಶ್ರೀ ಡಿಲೀಟ್ ಮಾಡಿದ್ದರು.

ಇದಾದ ನಂತರದಲ್ಲಿ ನಟ ಸುದೀಪ್ ಕೂಡ ಜಯಶ್ರೀ ಅವರಿಗೆ ಸಮಾಧಾನ ಮಾಡುವ ಪ್ರಯತ್ನವನ್ನು ಮಾಡಿದ್ದರು. ಮಾಧ್ಯಮಗಳ ಮುಂದೆ ಬಂದು ತಾನು ಆತ್ಮಹತ್ಯೆಗೆ ಯತ್ನಿಸಿರೋದಕ್ಕೆ ಕ್ಷಮೆಯಾಚನೆ ಮಾಡಿದ್ದರು. ಆದರೆ ಇದೀಗ ನಟಿ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

https://kannada.newsnext.live/sandalwood-bigboss-seson-3-jayashree-suscide-bangalore/

ಜಯಶ್ರೀ ಹಲವು ಸಮಯಗಳಿಂದಲೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ ಜಯಶ್ರೀ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

Comments are closed.