ಬಂಟ್ವಾಳ : ಅಂಗಡಿಗೆ ನುಗ್ಗಿ ಫೋಟೋಗ್ರಾಪರ್ ಹಾಗೂ ಬಿಜೆಪಿ ಕಾರ್ಯಕರ್ತನೋರ್ವನ ಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಫರಂಗಿಪೇಟೆಯಲ್ಲಿ ನಡೆದಿದೆ.

ಫರಂಗಿಪೇಟೆಯಲ್ಲಿರುವ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಎಂಬವರೇ ಮಾರಣಾಂತಿಕವಾಗಿ ಹಲ್ಲೆಗೊಳಗಾದವರು. ಇಂದು ರಾತ್ರಿಯ ವೇಳೆಯಲ್ಲಿ ಸ್ಪುಡಿಯೋದಲ್ಲಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.

ಸ್ಟುಡಿಯೋದೊಳಗೆ ನುಗ್ಗಿದ ಅಪರಿಚಿತ ವ್ಯಕ್ತಿಗಳು ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ ಸೋಜ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್, ಎಸ್. ಐ.ಪ್ರಸನ್ನ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.