ಬುಧವಾರ, ಜೂನ್ 18, 2025
HomeBreakingಸಂಬಳ ಕೇಳಿದ್ದೇ ತಪ್ಪಾಯ್ತು : ಗ್ರಾಮ ಸಹಾಯಕಿಯನ್ನು ಮಂಚಕ್ಕೆ ಕರೆದ ತಹಶೀಲ್ದಾರ್ !

ಸಂಬಳ ಕೇಳಿದ್ದೇ ತಪ್ಪಾಯ್ತು : ಗ್ರಾಮ ಸಹಾಯಕಿಯನ್ನು ಮಂಚಕ್ಕೆ ಕರೆದ ತಹಶೀಲ್ದಾರ್ !

- Advertisement -

ಶಿವಮೊಗ್ಗ : ಸಕಾಲದಲ್ಲಿ ವೇತನ ಪಾವತಿಯಾಗದೆ ಸಂಕಷ್ಟಕ್ಕೆ ಸಿಲುಕಿದ್ದ ಗ್ರಾಮ ಸಹಾಯಕಿಯೋರ್ವರು ತಹಶೀಲ್ದಾರ್ ಬಳಿಯಲ್ಲಿ ತನ್ನ ಕಷ್ಟವನ್ನು ಹೇಳಿಕೊಂಡಿದ್ದಾರೆ. ಸಂಬಳ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ವೇತನ ನೀಡಬೇಕಾಗಿದ್ದ ತಹಶೀಲ್ದಾರ್ ಮಾತ್ರ ಗ್ರಾಮ ಸಹಾಯಕಿಯನ್ನೇ ಮಂಚಕೆ ಕರೆದಿದ್ದಾರೆಂಬ ಆರೋಪ ಕೇಳಿಬಂದಿದೆ.

Alvas1

ಹೌದು, ಈ ಘಟನೆ ನಡೆದಿರೋದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಸಬಾ -2 ಸಿದ್ದಾಪುರ ವೃತ್ತದ ಗ್ರಾಮ ಲೆಕ್ಕಾಧಿಕಾರಿಗಳ ಬಳಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಆದ್ರೀಗ ವೇತನ ಕಳೆದ ನಾಲ್ಕು ತಿಂಗಳಿನಿಂದಲೂ ವೇತನ ಪಾವತಿಯಾಗಿರದ ಹಿನ್ನೆಲೆಯಲ್ಲಿ ಭದ್ರಾವತಿಯ ತಹಶೀಲ್ದಾರ್ ಶಿವಕುಮಾರ್ ಅವರ ಬಳಿಯಲ್ಲಿ ಮನವಿ ಮಾಡಲು ತೆರಳಿದ್ದು, ಈ ವೇಳೆಯಲ್ಲಿ ತನ್ನೊಂದಿ ಅಸಭ್ಯವಾಗಿ ಮಾತನಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿ ಭದ್ರಾವತಿಯ ಹಳೆನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Bhadravathi Police Station

ತಹಶೀಲ್ದಾರ್ ಶಿವಕುಮಾರ್ ವಿರುದ್ದ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾಧಿಕಾರಿಗಳು ಶಿವಕುಮಾರ್ ಅವರನ್ನು ಸೇವೆಯಿಂದ ಬಿಡುಗಡೆ ಮಾಡಿದ್ದಾರೆ. ಇತ್ತ ಶಿವಕುಮಾರ್ ಮೊಬೈಲ್ ನಾಟ್ ರೀಚಬಲ್ ಆಗಿದೆ. ಹೀಗಾಗಿ ಪೊಲೀಸರು ಶಿವಕುಮಾರ್ ಅವರನ್ನು ಹುಡುಕಾಡುತ್ತಿದ್ದಾರೆ. ತಹಸೀಲ್ದಾರ್ ವಿರುದ್ಧ ಗಂಭೀರ ಆರೋಪದ ಜತೆಗೆ ವಿವಿಧ ಸಂಘಟನೆಗಳ ಪ್ರಮುಖರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular