ಕಾಂಗ್ರೆಸ್ ಗೆ ಬಿಗ್ ಶಾಕ್ : ವಾರಂಬಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ, ಸದಸ್ಯರು ಬಿಜೆಪಿಗೆ ಸೇರ್ಪಡೆ

ಬ್ರಹ್ಮಾವರ : ಗ್ರಾಮ ಪಂಚಾಯತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಬ್ರಹ್ಮಾವರದಲ್ಲಿ ಭರ್ಜರಿ ಆಪರೇಷನ್ ನಡೆಸಿದೆ. ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರಾಗಿದ್ದ ಕಾಂಗ್ರೆಸ್ ಮುಖಂಡರನ್ನು ತನ್ನ ತೆಕ್ಕೆಗೆ ಸೆಳೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ಕಾಂಗ್ರೆಸ್ ಮುಖಂಡರಾಗಿದ್ದು ಕಳೆದ ಸಾಲಿನಲ್ಲಿ ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಕಾಂಗ್ರೆಸ್ ನಿತ್ಯಾನಂದ ಬಿ.ಆರ್, ಹಾಗೂ ಸದಸ್ಯರಾದ ಅಧ್ಯಕ್ಷ ಎಸ್.ನಾರಾಯಣ್, ನವೀನ್ ಚಂದ್ರ ನಾಯಕ್, ರಾಜು ಸಾಲ್ಯಾನ್, ದೇವಾನಂದ ಕ್ರಿಸ್ತೀನ್.

ಗೋಪಾಲ ದೇವಾಡಿಗ, ಕವಿತಾ, ಹೇಮಾ ಶೆಟ್ಟಿಗಾರ್, ಸದಾನಂದ ಪೂಜಾರಿ, ಗುಲಾಬಿ ಕುಂದರ್, ಸುರೇಶ್ ಬಿರ್ತಿ ಸೇರಿದಂತೆ 12 ಮಂದಿ ಕಾಂಗ್ರೆಸ್ ಮುಖಂಡರು ಶಾಸಕ ಕೆ.ರಘುಪತಿ ಭಟ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಪ್ರಧಾನ ಕಾರ್ಯದರ್ಶಿ ಅಶೋಕ್ ಹೇರೂರು, ವಾರಂಬಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಉಸ್ತುವಾರಿಗಳಾದ ಸುಧೀರ್ ಶೆಟ್ಟಿ, ಪಕ್ಷದ ಮುಖಂಡರಾದ ನಿಶಾನ್ ರೈ, ಬಿರ್ತಿ ರಾಜೇಶ್ ಶೆಟ್ಟಿ.

ತಾಲೂಕು ಪಂಚಾಯತ್ ಸದಸ್ಯರಾದ ಕುಸುಮ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಮೇಶ್ ನಾಯ್ಕ್, ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ನಾಗವೇಣಿ, ಬ್ರಹ್ಮಾವರ ಮಹಾಶಕ್ತಿ ಕೇಂದ್ರದ ಸದಸ್ಯರಾದ ಉಲ್ಲಾಸ್ ವಾರಂಬಳ್ಳಿ ಮತ್ತು ಹರೀಶ್ ಶೆಟ್ಟಿ ಚೇರ್ಕಾಡಿ ಸೇರಿದಂತೆ ಹಲವು ಉಪಸ್ಥಿತರಿದ್ದರು.

Comments are closed.