ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಇಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಸ್ವತಃ ಒಂದು ವಾರಗಳ ಕಾಲ ಕ್ವಾರಂಟೈನ್ ಗೆ ಒಳಪಡಲಿದ್ದಾರೆ.

ಸುಮಾರು 2 ತಿಂಗಳುಗಳ ಕಾಲ ದೆಹಲಿಯಲ್ಲಿಯೇ ಉಳಿದುಕೊಂಡಿದ್ದ ಡಿ.ವಿ.ಸದಾನಂದ ಗೌಡರು, ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ ಪಾತ್ರವಹಿಸಿದ್ದರು. ಇಂದು 10.30ಕ್ಕೆ ದೆಹಲಿಯಿಂದ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಪಾಲ್ಗೊಳ್ಳುವ ಸಚಿವರು, ಅಧಿಕಾರಿಗಳಿಗೆ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗಿದೆ. ಆದ್ರೂ ಕೂಡ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್ ಗೆ ಒಳಪಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.