ಚಾರ್ಮಾಡಿ ಘಾಟಿಯಲ್ಲಿ ಕಾರ್ ಪಲ್ಟಿ : ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

0

ಚಿಕ್ಕಮಗಳೂರು : ದಟ್ಟ ಮಂಜಿನಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಆದರೆ ಘಟನೆಯಲ್ಲಿ ಕಾರಿನಲ್ಲಿದ್ದವರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಾವಣಗೆರೆ ಮೂಲದ ಯುವಕರು ಚಾರ್ಮಾಡಿ ಘಾಟ್ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಕಳೆದ ಕೆಲ ದಿನಗಳಿಂದಲೂ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿತ್ತು. ಇದರಿಂದಾಗಿ ಚಾಲಕನಿಗೆ ರಸ್ತೆ ಕಾಣಿಸದೇ ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಜಲಪಾತದತ್ತ ಮಗುಚಿ ಬಿದ್ದಿದೆ.

ಕಾರಿನಲ್ಲಿದ್ದ ದಾವಣಗೆರೆ ಮೂಲದ ಐವರು ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂದಲೆಳೆಯ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಲಪಾತದ ಬಳಿ ಮಗುಚಿ ಬಿದ್ದ ಕಾರನ್ನ ಸ್ಥಳಿಯರು ಹಾಗೂ ಬಣಕಲ್ ಪೊಲೀಸರು ಸಹಕಾರದೊಂದಿಗೆ ಹಿಟಾಚಿ ಮೂಲಕ ಮೇಲಕ್ಕೆ ಎತ್ತಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.