ತೋಟಕ್ಕೆ ಹೋಗುವಾಗ ಚಿರತೆ ದಾಳಿ : ಯುವಕನಿಗೆ ಗಾಯ

0

ಚಿಕ್ಕಮಗಳೂರು : ತೋಟಕ್ಕೆ ಹೋಗುತ್ತಿದ್ದ ವೇಳೆಯಲ್ಲಿ ಚಿರತೆಯೊಂದು ದಾಳಿ ನಡೆದಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿಯಲ್ಲಿ ನಡೆದಿದೆ.

ಮುಕೇಶ್ ಗಾಯಗೊಂಡಿರುವ ಯುವಕ. ಮುಕೇಶ್ ಎಂದಿನಂತೆ ತನ್ನ ಬೈಕಿನಲ್ಲಿ ತೋಟಕ್ಕೆ ಹೋಗುತ್ತಿದ್ದರು.

ಈ ವೇಳೆಯಲ್ಲಿ ಚಿರತೆಯೊಂದು ಒಮ್ಮಿಂದೊಮ್ಮೆಲೆ ದಾಳಿ ನಡೆಸಿದೆ. ಈ ವೇಳೆಯಲ್ಲಿ ಮುಕೇಶ್ ಚಿರತೆಯೊಂದಿಗೆ ಹೋರಾಡಿ ತಪ್ಪಿಸಿಕೊಂಡಿದ್ದಾರೆ.

ಘಟನೆಯಲ್ಲಿ ಮುಕೇಶ್ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply

Your email address will not be published.