ನವದೆಹಲಿ : ಭಾರತ ಮತ್ತು ಚೀನಾ ಗಡಿ ವಿವಾದ ಇದೀಗ ತಾರಕಕ್ಕೇರಿದೆ. ಚೀನಾ ಮತ್ತು ಭಾರತೀಯ ಸೈನಿಕ ನಡುವಿನ ಸಂಘರ್ಷದಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಕಳೆದ ಕೆಲ ದಿನಗಳಿಂದಲೂ ಭಾರತ ಚೀನಾ ಗಡಿಯಲ್ಲಿ ಸಂಘರ್ಷ ಉಂಟಾಗಿತ್ತು. ನಿನ್ನೆ ರಾತ್ರಿ ಗಾಲ್ವಾನ್ ಗಡಿಯಲ್ಲಿ ಚೀನಾ ಸೈನಿಕರು ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.
ಗಾಲ್ವಾನ್ ಕಣಿವೆಯಲ್ಲಿ ನಡೆದಿರುವ ಸಂಘರ್ಷದ ಬೆನ್ನಲ್ಲೇ ಪರಿಸ್ಥಿತಿಯನ್ನು ಶಾಂತಗೊಳಿಸಲು ಭಾರತ ಹಾಗೂ ಚೀನಾ ಮುಂದಾಗಿದೆ.
ಈ ನಿಟ್ಟಿನಲ್ಲಿ ಎರಡೂ ದೇಶಗಳ ಅಧಿಕಾರಿಗಳು ಸಭೆಯನ್ನು ನಡೆಸುತ್ತಿದ್ದಾರೆ. ಕೊರೊನಾ ಸೋಂಕನ್ನು ವಿಶ್ವಕ್ಕೆ ಹರಡಿಸಿರುವ ಚೀನಾ ಇದೀಗ ಕೊರೊನಾ ಆರ್ಭಟದ ನಡುವಲ್ಲೇ ಚೀನಾ ಗಡಿ ಕ್ಯಾತೆ ತೆಗೆದಿದೆ.