ಸಿಎಂ ಯಡಿಯೂರಪ್ಪ ಸಂಧಾನ ಸಭೆ ಸಕ್ಸಸ್ …! ಎಲ್ಲಾ ಸಚಿವರು ಸಮಾಧಾನವಾಗಿದ್ದಾರೆ : ಬಿಎಸ್ ವೈ

ಬೆಂಗಳೂರು : ಎಲ್ಲಾ ಸಚಿವರನ್ನು ಕರೆದು ಮಾತನಾಡಿದ್ದೇನೆ. ಎಲ್ಲಾ ಸಚಿವರು ಸಮಾಧಾನವಾಗಿದ್ದಾರೆ. ಯಾವುದೇ ರೀತಿಯಲ್ಲಿಯೂ ಅಸಮಾಧಾನವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆಯ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಅಸಮಾಧಾನಿತರ ಸಚಿವರ ಸಭೆ ನಡೆಸಿದರು. ನಂತರ ಮಾತನಾಡಿದ ಸಿಎಂ, ಸಚಿವರಿಗೆ ಖಾತೆ ಹಂಚಿಕೆಯ ಬೆನ್ನಲ್ಲೇ ಅಸಮಾಧಾನ ವ್ಯಕ್ತವಾಗಿರುವುದು ನಿಜ. ಆದರೆ ಸಣ್ಣಪುಟ್ಟ ಸಮಸ್ಯೆಯನ್ನು ಪಕ್ಷದ ಚೌಕಟ್ಟಿನೊಳಗೆ ಬಗೆ ಹರಿಸಿಕೊಂಡಿದ್ದೇವೆ. ಎಲ್ಲಾ ಸಚಿವರನ್ನು ಕರೆದು ಮಾತನಾಡಿದ್ದೇನೆ ಎಂದಿದ್ದಾರೆ.

ಇನ್ನು ಸಿಎಂ ಸಂಧಾನ ಸಭೆ ಕೂಡ ಬಹುತೇಕ ಸಕ್ಸಸ್ ಆದಂತೆ ಕಾಣಿಸುತ್ತಿದೆ. ಸಭೆಯ ನಂತರ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್ ಹಾಗೂ ಗೋಪಾಲಯ್ಯ ಅವರು ಸಮಸ್ಯೆಯನ್ನು ಪಕ್ಷದ ಚೌಕಟ್ಟಿನಲ್ಲಿ ಪರಿಹರಿಸಿಕೊಳ್ಳುತ್ತೇವೆ. ಮುಖ್ಯಮಂತ್ರಿಗಳು ನೀಡಿದ ಖಾತೆಯನ್ನು ನಾವು ಸಮರ್ಥವಾಗಿ ನಿಭಾಯಿಸುತ್ತೇವೆ. ಯಾವುದೇ ರೀತಿಯಲ್ಲಿಯೂ ಅಸಮಾಧಾನ ಇಲ್ಲ ಎಂದಿದ್ದಾರೆ.

Comments are closed.