ಕೊರೊನಾ ಮಹಾಮಾರಿಗೆ ದ.ಕ. ಜಿಲ್ಲೆಯಲ್ಲಿ ಮೂರನೇ ಬಲಿ

0

ಮಂಗಳೂರು : ಕೊರೊನಾ ಮಹಾಮಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದೆ.ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ 67 ವರ್ಷದ ವೃದ್ದೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಕೊರೊನಾ ಮಹಾಮಾರಿಯಿಂದ ಈ ಹಿಂದೆ ಸಾವನ್ನಪ್ಪಿದ ವೃದ್ದ ಮಹಿಳೆಯ ಸಂಪರ್ಕದಿಂದ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಈ ವೃದ್ದೆಗೂ ಸೋಂಕು ವ್ಯಾಪಿಸಿತ್ತು. ಎಪ್ರಿಲ್ 19ರಂದು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕಸಬಾ ಗ್ರಾಮದಲ್ಲಿ ಇದುವರೆಗೆ 4 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈಗಾಗಲೇ ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾದಿಂದ ಬಲಿಯಾದವರ ಸಂಖ್ಯೆ ಇದೀಗ 22ಕ್ಕೆ ಏರಿಕೆಯಾಗಿದೆ.

Leave A Reply

Your email address will not be published.