ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಇನ್ನಿಲ್ಲದ ಕಸರತ್ತು ನಡೆಸಲಾಗುತ್ತಿದೆ. ಕೊರೊನಾ ವ್ಯಾಪಕವಾಗಿ ಹರಡುತ್ತಿರೋ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ಸುರಿದಿದೆ. ಮಳೆಯಿಂದಾಗಿ ಕೊರೊನಾ ಸೋಂಕು ಹೆಚ್ಚಳವಾಗೋ ಆತಂಕ ಶುರುವಾಗಿದೆ.

ಬನಶಂಕರಿ, ನಾಗರಬಾವಿ, ಬ್ಯಾಡರಹಳ್ಳಿ, ಸುಂಕದಕಟ್ಟೆ, ಬೆಂಗಳೂರು ಹೊರವಲಯದ ನೆಲಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಸುರಿದಿದೆ. ಮಳೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಮಾತ್ರವಲ್ಲ ಅಗತ್ಯವಸ್ತುಗಳ ಖರೀದಿಗಾಗಿ ಮಾರುಕಟ್ಟೆಗೆ ಆಗಮಿಸಿದ್ದ ಬೆಂಗಳೂರಿಗರು ಮಳೆಯಲ್ಲಿಯೇ ನೆನೆದುಕೊಂಡು ಅಗತ್ಯವಸ್ತುಗಳ ಖರೀದಿ ಮಾಡಿದ್ದಾರೆ.

ಮಳೆಯಿಂದಾಗಿ ಕೊರೊನಾ ಸೋಂಕು ಹರಡುವ ಆತಂಕವನ್ನು ತಜ್ಞರು ವ್ಯಕ್ತಪಡಿಸುತ್ತಿದ್ದಾರೆ. ಮಳೆಗಾಲಕ್ಕೂ ಮುನ್ನವೇ ಕೊರೊನಾ ನಿಯಂತ್ರಣಕ್ಕೆ ಬಾರದೇ ಇದ್ರೆ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಬೆಂಗಳೂರಿಗರು ಯಾವುದೇ ಕಾರಣಕ್ಕೂ ಮಳೆಯಲ್ಲಿ ನೆನೆಯಬಾರದು ಮಾತ್ರವಲ್ಲ ಯಾವುದೇ ಕಾರಣಕ್ಕೂ ಜನರು ಮನೆಯಿಂದ ಹೊರಗೆ ಬರಲೇ ಬಾರದು. ಮನೆಯಲ್ಲಿಯೇ ಇರೋದ್ರಿಂದ ಕೊರೊನಾ ನಿಯಂತ್ರಣಕ್ಕೆ ತರಲು ಸಾಧ್ಯ ಅಂತಿದ್ದಾರೆ ತಜ್ಞರು.