ಕೊರೊನಾ ಲಾಕ್ ಡೌನ್ : 1,200 ಕೋಟಿ ಭರ್ಜರಿ ಪ್ಯಾಕೇಜ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಸಿಎಂ ಯಡಿಯೂರಪ್ಪ ಭರ್ಜರಿ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದಾರೆ.

ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ನಂತರ ಸುದ್ದಿಗೋಷ್ಠಿ ನಡೆಸಿದರು. ಮೇ 24ರ ವರೆಗೆ ರಾಜ್ಯದಲ್ಲಿ ವಾಣಿಜ್ಯ ಹಾಗೂ ಇನ್ನಿತರ ಚಟುವಟಿಕೆಗೆ ನಿರ್ಬಂಧ ಹೇರಲಾಗಿತ್ತು. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಜನರು ಆಹಾರ ವಿಲ್ಲದೆ ಸಂಕಷ್ಟಕ್ಕೆ ಸಿಲುಕ ಬಾರದೆಂಬ ನಿಟ್ಟಿನಲ್ಲಿ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಹಿಂದೆ ಆರ್ಥಿಕ ಫ್ಯಾಕೇಜ್ ಘೋಷಣೆ ಮಾಡಿದೆ. ಇದೀಗ ಮತ್ತೆ ಸರಕಾರ 1250 ಕೋಟಿಗೂ ಅಧಿಕ ವೆಚ್ಚದಲ್ಲಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಹೂವು ಬೆಳೆಗಾರರಿಗೆ ಪ್ರತೀ ಹೆಕ್ಟೇರ್ ಗೆ 10 ಸಾವಿರ ಸಹಾಯಧನ ನೀಡಲಾಗುತ್ತಿದ್ದು, 20 ಸಾವಿರ ರೈತರಿಗೆ ಸಹಾಯವಾಗಲಿದೆ. ಹಣ್ಣು, ತರಕಾರಿ ಬೆಳೆಗಾರರಿಗೆ ಆದ ನಷ್ಟಕ್ಕೆ ಸಂಬಂಧಿಸಿದಂತೆ ಪ್ರತೀ ಹೆಕ್ಟೇರ್ ಗೆ 10 ಸಾವಿರ ರೂಪಾಯಿ, ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ 3000 ರೂಪಾಯಿ ಸಹಾಯಧನ ಘೋಷಣೆ ಮಾಡಿದ್ದಾರೆ.

ಕಟ್ಟಡ ಕಾರ್ಮಿಕರಿಗೆ 3 ಸಾವಿರ ರೂಪಾಯಿ, ಅಸಂಘಟಿತ ಕಾರ್ಮಿಕ ರಿಗೆ ತಲಾ 2000 ರೂಪಾಯಿ, ರಸ್ತೆ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂಪಾಯಿ ಸಹಾಯಧನ, ಕಲಾವಿದರು, ತಲಾತಂಡಗಳಿಗೆ 3 ಸಾವಿರ ರೂಪಾಯಿ, ರೈತರಿಗೆ ಸಾಲ ಹಾಗೂ ಸ್ವಸಹಾಯ ಸಂಘಗಳಿಂದ ಪಡೆದ ಸಾಲಗಳ ಮರುಪಾವತಿ ಕಂತುಗಳ ಪಾವತಿಯನ್ನು ಜುಲೈ ಅಂತ್ಯದ ವರೆಗೆ ವಿನಾಯಿತಿ ನೀಡಲಾಗಿದೆ. ಅಲ್ಲದೇ ಮೂರು ತಿಂಗಳ ಸಾಲದ ಅವಧಿಯ ಬಡ್ಡಿಯನ್ನು ಸರಕಾರವೇ ಭರಿಸಲಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಉಚಿತವಾಗಿ ಆಹಾರ ಸಾಮಗ್ರಿ ಗಳನ್ನು ವಿತರಿಸಲಾಗುತ್ತಿದೆ. ಆಹಾರದ ಕೊರತೆಯಿಂದ ಬಳಲ ಬಾರದೆಂಬ ನಿಟ್ಟಿನಲ್ಲಿ 6 ಲಕ್ಷ ಜನರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಆಹಾಯ ಒದಗಿಸುವ ಕಾರ್ಯ ನಡೆಯುತ್ತಿದೆ. ಗ್ರಾಮ ಪಂಚಾಯತಿ ಮಟ್ಟದ ಟಾಸ್ಕ್ ಪೋರ್ಸ್ ಗೆ ಸ್ಥಳೀಯ ಸಂಘ ಸಂಸ್ಥೆಗಳ ನೆರವು ಪಡೆಯಲಾಗುತ್ತದೆ.

https://kannada.newsnext.live/bollywood-sonusood-fake-covid-19-fund-donation-campaign/
https://kannada.newsnext.live/sandalwood-kgf-1-villain-maran-passedaway-corona-covid-19/

Comments are closed.