ಕಾರ್ಮಿಕರಿಗೆ 1,000 ರೂ., 2 ತಿಂಗಳ ಮುಂಗಡ ಪಡಿತರ, ಬಡವರಬಂಧು ಸಾಲ ಮನ್ನಾ : ಬಿಎಸ್ ವೈ ವಿಶೇಷ ಪ್ಯಾಕೇಜ್

0

ಬೆಂಗಳೂರು ; ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ರಾಜ್ಯವನ್ನೇ ಲಾಕ್ ಡೌನ್ ಮಾಡಿರೋ ರಾಜ್ಯ ಸರಕಾರ ಇದೀಗ ಕೊರೊನಾಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿದೆ. ರಾಜ್ಯದಲ್ಲಿರುವ 21 ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ 1,000 ರೂಪಾಯಿ ಘೋಷಣೆ ಮಾಡಲಾಗಿದ್ದು, ಎರಡು ತಿಂಗಳ ಪಡಿತರವನ್ನು ಮುಂಗಡವಾಗಿ ನೀಡಲು ರಾಜ್ಯ ಸರಕಾರ ಮುಂದಾಗಿದೆ. ಮಾತ್ರವಲ್ಲ ಬಡವರ ಬಂಧು ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ವಿಧಾನಮಂಡಲ ಅಧಿವೇಶ ಆರಂಭವಾಗುತ್ತಿದ್ದಂತೆಯೇ ಕೊರೊನಾ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವ ಬಿ.ಎಸ್.ಯಡಿಯೂರಪ್ಪ ಯಾರೂ ಕೂಡ ಮನೆಯಿಂದ ಹೊರಬರಲೇ ಬೇಡಿ ಅಂತಾ ಮನವಿ ಮಾಡಿದ್ದಾರೆ. ಬಿಪಿಎಲ್ ಪಡಿತರದಾರರಿಗೆ ಎರಡು ತಿಂಗಳ ಪಡಿತರವನ್ನು ಮುಂಗಡವಾಗಿ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಮನೆಯಲ್ಲಿರುವ ಕಟ್ಟಡ ಕಾರ್ಮಿಕರಿಗೆ ತಲಾ 1 ಸಾವಿರ ರೂಪಾಯಿಯನ್ನು ನೀಡುವುದಾಗಿ ಘೋಷಿಸಲಾಗಿದೆ.

Leave A Reply

Your email address will not be published.