ರಾಜ್ಯದಲ್ಲಿ ಮತ್ತೆ ಶುರುವಾಯ್ತು ಕೊರೊನಾ ಭೀತಿ : ಒಂದೇ ದಿನ 921 ಮಂದಿಗೆ ಕೊರೊನಾ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ. ಕಳೆದ ಕೆಲ ದಿನಗಳಿಂದಲೂ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗುತ್ತಿದೆ. ಶನಿವಾರ ರಾಜ್ಯದಲ್ಲಿ ಒಟ್ಟು 921 ಮಂದಿಗೆ ಸೋಂಕು ದೃಢಪಟ್ಟಿದೆ.

ಕಳೆದಾರು ತಿಂಗಳಿನಿಂದ ತಣ್ಣಗಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ ನಿಧಾನವಾಗಿ ಏರಿಕೆ ಕಾಣುತ್ತಿದೆ. ಅದ್ರಲ್ಲೂ ಕಳೆದೊಂದು ವಾರದಿಂದಲೂ ಸೋಂಕಿತ ಪ್ರಮಾಣದಲ್ಲಿ ಭಾರೀ ಏರಿಕೆಯನ್ನು ಕಾಣುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸೋಂಕಿತರ ಸಂಖ್ಯೆ ನಿತ್ಯವೂ 500 ಗಡಿದಾಟುತ್ತಿದೆ. ಇದೀಗ ರಾಜ್ಯದಲ್ಲಿ ಒಂದೇ ದಿನ 921 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಒಟ್ಟು ಸಂಖ್ಯೆ 959338ಕ್ಕೆ ಏರಿಕೆಯಾಗಿದೆ.8042 ಒಟ್ಟು ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 12,387 ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದೆ. ರಾಜ್ಯದಲ್ಲಿಯೂ ಇದೀಗ ಎರಡನೇ ಅಲೆಯ ಭೀತಿ ಎದುರಾಗಿದ್ದು, ಆರೋಗ್ಯ ಇಲಾಖೆ ಮಾರ್ಗಸೂಚನೆಗಳನ್ನು ಪಾಲನೆ ಮಾಡುವಂತೆ ಸೂಚನೆಯನ್ನು ನೀಡಿದೆ.

Comments are closed.