ರಾಜ್ಯದಲ್ಲಿ ಲಾಕ್ ಡೌನ್ ಜಾರಿ : ಸಿಎಂ ಯಡಿಯೂರಪ್ಪ ಹೇಳಿದ್ದೇನು..?

ಬೀದರ್ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ‌ ಆರ್ಭಟ ಹೆಚ್ಚುತ್ತಿದ್ದು, ಲಾಕ್ ಡೌನ್ ಮಾಡುವ ಅನಿವಾರ್ಯತೆ ಎದುರಾದರೆ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.  ಜನರು ಅಗತ್ಯ‌ ಮುನ್ನೆಚ್ಚರಿಕೆಯನ್ನು ಕೈಗೊಳ್ಳಲೇ ಬೇಕು. ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ, ಸರ್ವಪಕ್ಷ ಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳ ಲಾಗುವುದು ಎಂದಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.  ಜನರ ಆರೋಗ್ಯದ ದೃಷ್ಟಿಯಿಂದ ಹಲವು ನಿಯಮಗಳನ್ನು ಜಾರಿಗೆ ತರಲಾಗಿದೆ. ಲಾಕ್‌ಡೌನ್ ಜಾರಿ ಮಾಡುವ ಉದ್ದೇಶ ಸರಕಾರಕ್ಜೆ ಇಲ್ಲ. ಒಂದೊಮ್ಮೆ ಅಗತ್ಯ ಬಿದ್ದರೆ, ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದಿದ್ದಾರೆ.

Comments are closed.