ಮಂಗಳವಾರ, ಏಪ್ರಿಲ್ 29, 2025
HomeBreakingವಿದೇಶದಲ್ಲಿ ನೆಲೆಸಿರುವ ಭಾರತೀಯರನ್ನ ತಕ್ಷಣಕ್ಕೆ ಕರೆತರಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ವಿದೇಶದಲ್ಲಿ ನೆಲೆಸಿರುವ ಭಾರತೀಯರನ್ನ ತಕ್ಷಣಕ್ಕೆ ಕರೆತರಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

- Advertisement -

ನವದೆಹಲಿ : ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ವಿದೇಶದಲ್ಲಿ ನೆಲೆಸಿರುವ ಭಾರತೀಯರನ್ನು ತಕ್ಷಣಕ್ಕೆ ಭಾರತಕ್ಕೆ ಕರೆಯಿಸಿಕೊಳ್ಳಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಯುಎಇಯಲ್ಲಿ ತನ್ನ ದೇಶಗಳಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳನ್ನು ವಾಪಾಸ್ ಕರೆಯಿಸಿಕೊಳ್ಳುವಂತೆ ಯುಎಇ ಭಾರತಕ್ಕೆ ಎಚ್ಚರಿಕೆಯನ್ನು ನೀಡಿತ್ತು.

ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೋವಿಡ್ -19 ಸೋಂಕು ದೇಶದಲ್ಲಿ ನಿಯಂತ್ರಣಕ್ಕೆ ಬರುವರೆಗೂ ವಿದೇಶದಲ್ಲಿ ನೆಲೆಸಿರುವ ಭಾರತೀಯರನ್ನು ಕರೆತರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇನ್ನು ಭಾರತದಲ್ಲಿರುವ ವಿದೇಶಿ ಪ್ರಜೆಗಳ ವೀಸಾ ಅವಧಿಯನ್ನು ಭಾರತೀಯ ಗೃಹ ಸಚಿವಾಲಯದ ತೀರ್ಪಿನ ನಂತರ ಸುಪ್ರೀಂ ಕೋರ್ಟ್ ವಿಸ್ತರಣೆ ಮಾಡಿದೆ. ವಿದೇಶಿ ಪ್ರಜೆಗಳ ನಿಯಮಿತ ವೀಸಾ, ಇ-ವೀಸಾ ಹಾಗೂ ವಾಸ್ತವ್ಯದ ಷರತ್ತುಗಳ ವೀಸಾ ಅವಧಿಯನ್ನು ಎಪ್ರಿಲ್ 30ರ ಮಧ್ಯರಾತ್ರಿಯವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular