ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹಾರ್ಟ್ ಅಟ್ಯಾಕ್….! ಸಂಜೆ ವೇಳೆಗೆ ಶಸ್ತ್ರಚಿಕಿತ್ಸೆ…!!

ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿಗೆ ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಮ್‌ನಲ್ಲಿ ವರ್ಕ್ಔಟ್ ಮಾಡ್ತಿದ್ದ ವೇಳೆ ದಾದಾ ಅಸ್ವಸ್ಥರಾಗಿದ್ದು ತಕ್ಷಣ ಅವರು ಸಮೀಪದ ವುಡ್ ಲ್ಯಾಂಡ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಈ ವೇಳೆ ಅವರಿಗೆ ಹೃದಯಾಘಾತ ಆಗಿರುವ ಸಂಗತಿ ಬೆಳಕಿಗೆ ಬಂದಿದೆ. ಈಗ ಸೌರವ್ ಗಂಗೂಲಿ ಚಿಕಿತ್ಸೆಗಾಗಿ ವುಡ್ ಲ್ಯಾಂಡ್ ಹಾಸ್ಪಿಟಲ್ ನಲ್ಲಿ ತಜ್ಞ ವೈದ್ಯರ ತಂಡ ರಚಿಸಲಾಗಿದ್ದು ಸಂಜೆ ವೇಳೆಗೆ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಸರ್ಜರಿ ನಡೆಯಲಿದೆ.

ಸಧ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಕೆಲಗಂಟೆಗಳಲ್ಲಿ ಹೆಲ್ತ್ ಬುಲೆಟಿನ್ ಕೂಡ ರಿಲೀಸ್ ಆಗಲಿದೆ. ಸೌರವ ಗಂಗೂಲಿಗೆ ಇದೇ ಮೊದಲ ಬಾರಿಗೆ ಈ ರೀತಿ ಅನಾರೋಗ್ಯ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಕೆಲ ತಿಂಗಳ ಹಿಂದೆ ಕಪಿಲ್ ದೇವ್ ಕೂಡ ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬೇಗ ಚೇತರಿಸಿಕೊಳ್ಳಲಿ ಎಂದು ಕ್ರಿಕೆಟ್ ಪ್ರೇಮಿಗಳು ಹಾರೈಸುತ್ತಿದ್ದಾರೆ.

Comments are closed.