Darshan-Indrajeeth: ದಲಿತ ವೇಟರ್ ಮೇಲೆ ಕೈಮಾಡಿದ್ರಾ ದಚ್ಚು…! ದರ್ಶನ್ ವಿರುದ್ಧ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ…!!

25 ಕೋಟಿ ಸಾಲ ಪ್ರಕರಣದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಸ್ನೇಹಿತರ ಮೇಲೆ ದಲಿತ ವೇಟರ್ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಮೈಸೂರಿನ ಸಂದೇಶ್ ಪ್ರಿನ್ಸ್ ಹೊಟೇಲ್ ನಲ್ಲಿ ಹಲ್ಲೆ ನಡೆದಿದ್ದು, ಸಿಸಿಟಿವಿ ವಿಡಿಯೋ ಡಿಲೀಟ್ ಮಾಡಿ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ.

ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕೋರಿ ಗೃಹ ಸಚಿವ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಇಂದ್ರಜಿತ್ ಲಂಕೇಶ್ ಮನವಿ ಸಲ್ಲಿಸಿದ್ದಾರೆ. ಕಳೆದ ಎರಡು-ಮೂರು ದಿನಗಳ ಹಿಂದೆ ದರ್ಶನ್ ಹಾಗೂ ಸ್ನೇಹಿತರು ದಲಿತ ವೇಟರ್ ಮೇಲೆ ಹಲ್ಲೆ ಮಾಡಿದ್ದಾರೆ.

ದರ್ಶನ್ ಹಾಗೂ ಸ್ನೇಹಿತರ ಹಲ್ಲೆಯಿಂದ ಆ ವೇಟರ್ ತನ್ನ ಕಣ್ಣು ಕಳೆದುಕೊಂಡಿದ್ದಾನೆ. ಆದರೆ ಮೈಸೂರು ಪೊಲೀಸರು ಸೆಟ್ಲಮೆಂಟ್ ಮಾಡಿಸಿದ್ದು, ಹಣ ಪಡೆದು ಕೇಸ್ ಮುಚ್ಚಿಹಾಕಿದ್ದಾರೆ ಎಂದು ಇಂದ್ರಜಿತ್ ಆರೋಪಿಸಿದ್ದಾರೆ.

ದಲಿತ ವೇಟರ್ ಮೇಲೆ ಹಲ್ಲೆ ನಡೆದ ಬಳಿಕ ಆತನ ಪತ್ನಿ ಪೊರಕೆ ಹಿಡಿದು ಮೈಸೂರಿನ ಸಂದೇಶ್ ಪ್ರಿನ್ಸ್ ಹೊಟೇಲ್ ಬಳಿ ಬಂದಿದ್ದಳು. ಆದರೆ ಕೊನೆಗೆ ದುಡ್ಡು ಕೊಟ್ಟು ಬಾಯಿ ಮುಚ್ಚಿಸಲಾಗಿದೆ. ದರ್ಶನ್ ನೇರಾನೇರ ತಲೆ ತೆಗೆಯುತ್ತೇನೆ. ಕೊಲೆ ಮಾಡುತ್ತೇನೆ ಎಂಬರ್ಥದಲ್ಲಿ ಮಾತನಾಡುತ್ತಾರೆ. ಇದು ಅವರ ಸಂಸ್ಕಾರ ತೋರಿಸುತ್ತದೆ ಎಂದು ಇಂದ್ರಜಿತ್ ಹೇಳಿದ್ದಾರೆ.

ಪ್ರಕರಣ ಸಂಪೂರ್ಣ ತನಿಖೆಯಾಗಬೇಕು. 25 ಕೋಟಿ ರೂಪಾಯಿ ಪ್ರಕರಣದಲ್ಲೂ ದರ್ಶನ್ ಹಾಗೂ ತಂಡ  ಆ ಹೆಣ್ಣುಮಗಳನ್ನು ದುರ್ಬಳಕೆ ಮಾಡಿಕೊಂಡಿದೆ. ಹೀಗಾಗಿ ದರ್ಶನ್ ಹಾಗೂ ಸ್ನೇಹಿತರ ಆಟಾಟೋಪಕ್ಕೆ  ಕಡಿವಾಣ ಬೀಳಬೇಕು.ಇಲ್ಲದಿದ್ದರೇ ಉಗ್ರ ಹೋರಾಟ ನಡೆಸುತ್ತೇವೆ ಎಂದು ಇಂದ್ರಜಿತ್ ಲಂಕೇಶ್ ಎಚ್ಚರಿಸಿದ್ದಾರೆ.

Comments are closed.