ಸೋಮವಾರ, ಏಪ್ರಿಲ್ 28, 2025
HomeBreakingಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ : ಓರ್ವ ಸಾವು, ಮತ್ತೋರ್ವ ಗಂಭೀರ

ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ : ಓರ್ವ ಸಾವು, ಮತ್ತೋರ್ವ ಗಂಭೀರ

- Advertisement -

ಶಿವಮೊಗ್ಗ : ಯುವಕರಿಬ್ಬರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ರೆ, ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೆ.ಆರ್.ಪುರಂ ನಿವಾಸಿ ಜೀವನ್ ಸಾವನ್ನಪ್ಪಿದ್ರೆ, ಸಿಗೇಹಟ್ಟಿಯ ನಿವಾಸಿ ಕೇಶವ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗ ನಗರದ ಎನ್.ಟಿ.ರಸ್ತೆಯಲ್ಲಿರುವ ಸುಂದರ ಆಶ್ರಯ ಲಾಡ್ಜ್ ಬಳಿಯಲ್ಲಿ ಈ ಘಟನೆ ನಡೆದಿದ್ದು, ಕ್ಷುಲಕ ಕಾರಣಕ್ಕೆ ಯುವಕರಿಬ್ಬರ ಮೇಲೆ ಐದಾರು ಮಂದಿಯ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಯುವಕರ ಗುಂಪು ಚಾಕುವಿನಿಂದ ಇರಿದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಇದನ್ನೂ ಓದಿ :

https://kannada.newsnext.live/violence-by-police-during-vehicle-inspection-son-arrest-mother-hospitalize/

ಆದರೆ ಜೀವನ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆದರೆ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪ್ರಕರಣದ ದಾಖಲು ಮಾಡಿಕೊಂಡಿರುವ ದೊಡ್ಡಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular