ಭಾನುವಾರ, ಏಪ್ರಿಲ್ 27, 2025
HomeBreakingಹೆದ್ದಾರಿಯಲ್ಲಿ ವಾಹನ ತಡೆದು ದರೋಡೆ : ನಾಲ್ವರು ವಿದ್ಯಾರ್ಥಿಗಳ ಬಂಧನ

ಹೆದ್ದಾರಿಯಲ್ಲಿ ವಾಹನ ತಡೆದು ದರೋಡೆ : ನಾಲ್ವರು ವಿದ್ಯಾರ್ಥಿಗಳ ಬಂಧನ

- Advertisement -

ಹಾಸನ : ಅವ್ರೆಲ್ಲಾ ಬೆಂಗಳೂರಿನ ವಿವಿಧ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ರು. ಆದರೆ ಕತ್ತಲಾದ್ರೆ ಸಾಕು ಹೆದ್ದಾರಿಗೆ ಇಳಿದು ದರೋಡೆ ನಡೆಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿಯ ವೇಳೆ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಿತಿನ್‌ ಗೌಡ ( 19 ವರ್ಷ), ಹೃತಿಕ್‌ (19 ವರ್ಷ ), ಯಲಹಂಕದ ಮಲ್ಲಿಕಾರ್ಜುನ (19 ವರ್ಷ ) ಮತ್ತು ಬೆಂಗಳೂರು ಅಮೃತಹಳ್ಳಿ ಹರ್ಷಿತ್‌ (22 ವರ್ಷ ) ಬಂಧಿತರರು. ತಂಡದಲ್ಲಿದ್ದ ಅಮೃತಹಳ್ಳಿಯ ನಿವಾಸಿ ರಾಜವರ್ಧರ್ ಎಂಬಾತ ಪರಾರಿಯಾಗಿದ್ದಾನೆ.

ರಾತ್ರಿಯಾಗುತ್ತಿದ್ದಂತೆಯೇ ಹೆದ್ದಾರಿಗೆ ಎಂಟ್ರಿಕೊಡ್ತಾ ಇದ್ದ ಯುವಕರ ತಂಡ ರಸ್ತೆಯಲ್ಲಿ ತೆರಳುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿತ್ತು. ಅಂತೆಯೇ ಕೊಣನೂರು- ಕುಶಾಲನಗರ ರಾಜ್ಯ ಹೆದ್ದಾರಿಯ ಸಿದ್ದಾಪುರದ ಬಳಿ ಎಡ ಭಾಗದಲ್ಲಿ ಐವರು ಯುವಕರು ಮಾರಕಾಸ್ತ್ರಗಳನ್ನು ತೋರಿಸಿ ದರೋಡೆಗೆ ಯತ್ನಿಸುತ್ತಿದ್ದ ವೇಳೆಯಲ್ಲಿ ಕೊಣನೂರು ಪೊಲೀಸ್ ಠಾಣೆಯ ಪಿಎಸ್ ಐ ಅಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ.

ಆರೋಪಿಗಳಿಂದ ಬ್ಲೇಟ್, ಕಬ್ಬಿಣದ ರಾಡ್ ಸೇರಿದಂತೆ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದು, ಪರಾರಿಯಾಗಿರುವ ಆರೋಪಿಗಾಗಿ ಬಲೆ ಬೀಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular