ಮಿನಿ ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ : 11 ಮಂದಿ ದುರ್ಮರಣ

ಧಾರವಾಡ : ಮಿನಿ ಬಸ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಫಘಾತದಲ್ಲಿ 11 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ದ ಇಟ್ಟಿಗಟ್ಟಿ ಬಳಿ ನಡೆದಿದೆ.

ಸಂಕ್ರಮಣದ ಕರಿ ನಿಮಿತ್ತ ದಾವಣಗೆರೆಯಿಂದ ಗೋವಾಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಿನಿ ಬಸ್ ನಲ್ಲಿ ಒಟ್ಟು 20 ಮಂದಿ ತೆರಳುತ್ತಿದ್ದು, ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಸಂಚರಿಸುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಟಿಪ್ಪರ್ ಮಿನಿ ಬಸ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ 9 ಮಹಿಳೆಯರು, ಓರ್ವ ಬಾಲಕ ಸೇರಿದಂತೆ ಒಟ್ಟು 11 ಮಂದಿ ಸ್ಥಳದಲ್ಲಿ ಯೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಸ್ಥಳಕ್ಕೆ ಎಸ್ ಪಿ ಕೃಷ್ಣಕಾಂತ್ ಭೇಟಿ ನೀಡಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://kannada.newsnext.live/7minutes-of-tearing-cake-came-to-kundapur-7th-heaven/

Comments are closed.