ಭಾನುವಾರ, ಏಪ್ರಿಲ್ 27, 2025
HomeBreakingಮಧ್ಯರಾತ್ರಿಯಿಂದಲೇ ದೇಶೀಯ ವಿಮಾನಯಾನ ಸೇವೆ ಬಂದ್

ಮಧ್ಯರಾತ್ರಿಯಿಂದಲೇ ದೇಶೀಯ ವಿಮಾನಯಾನ ಸೇವೆ ಬಂದ್

- Advertisement -

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ತಡೆಗೆ ಕೇಂದ್ರ ಸರಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ವಿಮಾನಯಾನ ಸಚಿವಾಲಯ ದೇಶೀಯ ವಿಮಾನಗಳ ಹಾರಾಟವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ದೇಶದಲ್ಲಿ ಕೊರೊನಾ ಸೋಂಕು ಹರಡಲು ವಿಮಾನಗಳೇ ಪ್ರಮುಖ ಕಾರಣವೆನ್ನಲಾಗುತ್ತಿದೆ. ವಿಮಾನದಲ್ಲಿ ಕೊರೊನಾ ಸೋಂಕಿತರು ಪ್ರಯಾಣಿಸಿದರೆ, ಸಹ ಪ್ರಯಾಣಿಕರಿಗೂ ಕೂಡ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ದೇಶೀಯ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.

ಸ್ವಾತಂತ್ರ್ಯಾ ನಂತರದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ದೇಶೀಯ ವಿಮಾನಯಾನ ಸೇವೆಯನ್ನು ಬಂದ್ ಮಾಡಲಾಗುತ್ತಿದೆ. ಇಂದು ಮಧ್ಯರಾತ್ರಿಯಿಂದಲೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ವಿಮಾನಯಾನ ಸೇವೆ ರದ್ದು ಆಗಲಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular