ಮಧ್ಯರಾತ್ರಿಯಿಂದಲೇ ದೇಶೀಯ ವಿಮಾನಯಾನ ಸೇವೆ ಬಂದ್

0

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ತಡೆಗೆ ಕೇಂದ್ರ ಸರಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ವಿಮಾನಯಾನ ಸಚಿವಾಲಯ ದೇಶೀಯ ವಿಮಾನಗಳ ಹಾರಾಟವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ದೇಶದಲ್ಲಿ ಕೊರೊನಾ ಸೋಂಕು ಹರಡಲು ವಿಮಾನಗಳೇ ಪ್ರಮುಖ ಕಾರಣವೆನ್ನಲಾಗುತ್ತಿದೆ. ವಿಮಾನದಲ್ಲಿ ಕೊರೊನಾ ಸೋಂಕಿತರು ಪ್ರಯಾಣಿಸಿದರೆ, ಸಹ ಪ್ರಯಾಣಿಕರಿಗೂ ಕೂಡ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ದೇಶೀಯ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.

ಸ್ವಾತಂತ್ರ್ಯಾ ನಂತರದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ದೇಶೀಯ ವಿಮಾನಯಾನ ಸೇವೆಯನ್ನು ಬಂದ್ ಮಾಡಲಾಗುತ್ತಿದೆ. ಇಂದು ಮಧ್ಯರಾತ್ರಿಯಿಂದಲೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ವಿಮಾನಯಾನ ಸೇವೆ ರದ್ದು ಆಗಲಿದೆ.

Leave A Reply

Your email address will not be published.