Manikandan Arrest : ನಟಿಯ ಮೇಲೆ ಅತ್ಯಾಚಾರ ಆರೋಪ ಬೆಂಗಳೂರಲ್ಲಿ ಮಾಜಿ ಸಚಿವ ಅರೆಸ್ಟ್ ..!

ಬೆಂಗಳೂರು : ನಟಿಯೋರ್ವಳ ಮೇಲೆ ಅತ್ಯಾಚಾರವೆಸಗಿ, ಗರ್ಭಪಾತ ಮಾಡಿಸಿ ನಂತರ ಕೊಲೆ ಬೆದರಿಕೆಯೊಡ್ಡಿದ್ದ ಆರೋಪದ ಹಿನ್ನೆಲೆಯಲ್ಲಿ ತಮಿಳುನಾಡಿನ ಮಾಜಿ ಸಚಿವ ಮಣಿಕಂದನ್ ಅವರನ್ನು ಬೆಂಗಳೂರಿನಲ್ಲಿ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಆರೋಪ ಕೇಳಿಬಂದ ಬೆನ್ನಲ್ಲೇ ಮಣಿಕಂದನ್ ತಲೆ ಮರೆಯಿಸಿಕೊಂಡಿದ್ದು, ತಮಿಳುನಾಡು ಪೊಲೀಸರ ವಿಶೇಷ ತಂಡ ಕೊನೆಗೂ ಮಣಿಕಂದನ್ ಅವರನ್ನು ಬಂಧಿಸಿದೆ.

ಎಐಎಡಿಎಂಕೆ ಪಕ್ಷದ ಮಣಿಕಂದನ್ 2017ರಲ್ಲಿ ಐಟಿ ಸಚಿವರಾಗಿದ್ದ ವೇಳೆಯಲ್ಲಿ ಮಲೇಷ್ಯಾದ ನಟಿಯೊಂದಿಗೆ ಪರಿಚಯವಾಗಿತ್ತು. ಮಲೇಷ್ಯಾದಲ್ಲಿ ಹೂಡಿಕೆ ಮಾಡುವ ಸಲುವಾಗಿ ನಟಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದರು. ವ್ಯವಹಾರದ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಚೆನ್ನೈ ನಡುವೆ ಇಬ್ಬರೂ ಸಾಕಷ್ಟು ಬಾರಿ ಓಡಾಡಿಕೊಂಡಿದ್ದರು. ನಂತರದಲ್ಲಿ ನಟಿಯನ್ನು ಮದುವೆಯಾಗುವುದಾಗಿಯೂ ಭರವಸೆಯನ್ನು ನೀಡಿದ್ದಾರೆ. ಹಲವು ವರ್ಷಗಳ ಕಾಲ ಇಬ್ಬರೂ ಲಿವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿಯೂ ಇದ್ದರು. ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಮಣಿಕಂದನ್ ನಟಿಯ ಮೇಲೆ ಅತ್ಯಾಚಾರವೆಸಗಿ, ಮೂರು ಬಾರಿ ಗರ್ಭಪಾತವನ್ನೂ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.

ನಂತರದಲ್ಲಿ ನಟಿ ಮದುವೆಯಾಗುವಂತೆ ಮನವಿ ಮಾಡಿದಾಗ ನಟಿ ಹಾಗೂ ಕುಟುಂಬಸ್ಥರಿಗೂ ಮಣಿಕಂದನ್ ಕೊಲೆ ಬೆದರಿಕೆಯೊಡ್ಡಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಟಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಣಿಕಂದನ್ ತಮಿಳುನಾಡು ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ ಮಣಿಕಂದನ್ ಬೆಂಗಳೂರಿನಲ್ಲಿ ತಲೆಮರೆಯಿಸಿಕೊಂಡಿದ್ದಾರೆ.

ಜೆಡಿಎಸ್ ಮುಖಂಡರಾದ ತಮ್ಮ ನಾಯಕನಹಳ್ಳಿ ಶ್ರೀನಿವಾಸ್ ಅವರಿಗೆ ಸೇರಿದ ಮನೆಯಲ್ಲಿ 10 ದಿನಗಳಿಂದ ವಾಸ್ತವ್ಯ ಹೂಡಿರುವ ಕುರಿತು ಮಾಹಿತಿ ಪಡೆದ ತಮಿಳುನಾಡು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.

Comments are closed.