ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ವಿಚಾರ ಗೊತ್ತೇ ಇಲ್ಲಾ : ಸಚಿವ ಜಗದೀಶ್ ಶೆಟ್ಟರ್​

0

ಹುಬ್ಬಳ್ಳಿ : ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆಯಾಗುತ್ತಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ನನಗೆ ಏನೂ ಗೊತ್ತಿಲ್ಲ. ಬಿಜೆಪಿ ಸೇರ್ಪಡೆ ಕುರಿತು ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಬಿಜೆಪಿ ಸೇರ್ಪಡೆಗೆ ಸಂಬಂಧಿಸಿದಂತೆ ನಮ್ಮನ್ನು ಯಾರೂ ಸಂಪರ್ಕಿಸಿಲ್ಲ‌, ನಾವೂ ಯಾರನ್ನೂ ಸಂಪರ್ಕಿಸಿಲ್ಲ ಎಂದಿದ್ದಾರೆ. ವಿನಯ್ ಕುಲಕರ್ಣಿ ನಮ್ಮ ಪಕ್ಷಕ್ಕೆ ಸೇರುತ್ತಾರೋ, ಬಿಡುತ್ತಾರೋ ಏನೂ ಗೊತ್ತಿಲ್ಲ‌. ನಮ್ಮ ವರಿಷ್ಠರು ಕೂಡ ಈ ಬಗ್ಗೆ ನಮ್ಮ ಜೊತೆ ಚರ್ಚಿಸಿಲ್ಲ. ವಿನಯ್ ಕುಲಕರ್ಣಿ ಅಥವಾ ಅವರ ಪರವಾಗಿ ಯಾರೂ ಕೂಡ ಇದುವರೆಗೂ ಮಾತನಾಡಿಲ್ಲ. ಅವರ ಕಡೆಯಿಂದ ಹೇಳಿಕೆಗಳು ಬಂದರೆ ಪ್ರತಿಕ್ರಿಯೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಸಿಬಿಐ ಕುಣಿಕೆ ತಪ್ಪಿಸಿಕೊಳ್ಳು ಕಮಲದ ಮೊರೆ ಹೋದ್ರಾ ಕುಲಕರ್ಣಿ

ಜಿಲ್ಲಾ ಪಂಚಾಯತ್​ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯು ತೀವ್ರ ಗೊಳಿಸಿರುವುದು ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರು ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಸೇರಬಯ ಸಲು ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಎರಡು ತಿಂಗಳಿಂದ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.