ಡಿಸೆಂಬರ್ 8 ರಂದು ಭಾರತ್ ಬಂದ್

ನವದೆಹಲಿ : ಕೇಂದ್ರ ಸರಕಾರ ಕೃಷಿ ಕಾನೂನು ವಿರುದ್ದ ಸಿಡಿದೆದ್ದಿರುವ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಇದೀಗ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು ರೈತ ಮುಖಂಡರು ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಿದ್ದಾರೆ.

ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸರಕಾರ ಹಾಗೂ ರೈತ ಸಂಘಟನೆಗಳ ನಡುವೆ ಮಾತುಕತೆ ನಡೆದಿದ್ದು, ಮಾತುಕತೆ ವಿಫಲವಾಗಿದೆ. ಸರಕಾರ ರೈತರ ಬೇಡಿಕೆಗೆ ಮಣಿಯು ಸಾಧ್ಯತೆ ತೀರಾ ಕಡಿಮೆ. ಈ ಹಿನ್ನೆಲೆಯಲ್ಲಿ ಇನ್ನೊಂದು ಸುತ್ತಿನ ಸಭೆ ನಡೆಯಲಿದೆ.

ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ರೈತರು ಈಗಾಗಲೇ ಸರಕಾರ ಕೇಳಿಕೊಂಡಿದ್ದೇವೆ. ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಡಿಸೆಂಬರ್ 8ರಂದು ಭಾರತ್ ಬಂದ್ ಗೆ ಕರೆ ನೀಡಿದ್ದೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ನ ಪ್ರಧಾನ ಕಾರ್ಯದರ್ಶಿ ಹರ್ವೀಂದರ್ ಸಿಂಗ್ ಲಡ್ಪ್ವಾಲ್ ತಿಳಿಸಿದ್ದಾರೆ.

ಡಿಸೆಂಬರ್ 5 ರಂದು ನಡೆಯಲಿರುವ ಸಭೆಯಲ್ಲಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದರೆ, ಕೃಷಿ ಕಾನೂನಿನ ವಿರುದ್ದ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆಂದು ರೈತ ಮುಖಂಡರು ಎಚ್ಚರಿಸಿದ್ದಾರೆ.

Comments are closed.