ಕೊರೊನಾ ಎಫೆಕ್ಟ್ : ಭಟ್ಕಳದಲ್ಲಿ ಹೆಲ್ತ್ ಎಮರ್ಜೆನ್ಸಿ ಘೋಷಣೆ

0

ಕಾರವಾರ : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಹೆಲ್ತ್ ಎಮರ್ಜೆನ್ಸಿ ಜಾರಿ ಮಾಡಲಾಗಿದೆ. ಭಟ್ಕಳ ಪಟ್ಟಣ, ಜಾಲಿ, ಶಿರಾಲಿ, ಹೆಬಳೆ, ಮಾವಿನಕುರ್ವಾ, ಮುಂಡಳ್ಳಿ, ಯಲ್ವಡಿಕವೂರು ಹಾಗೂ ಮುಟ್ಠಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ ಎಮರ್ಜೆನ್ಸಿ ಘೋಷಣೆ ಮಾಡಿ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಆದೇಶ ಹೊರಡಿಸಿದ್ದಾರೆ. ಮಾರ್ಚ್ 19ರಂದು ದುಬೈನಿಂದ ಮಂಗಳೂರಿಗೆ ಬಂದಿದ್ದ ದುಬೈ ಮೂಲದ ವ್ಯಕ್ತಿ ಹಾಗೂ ಮಾರ್ಚ್ 24ರಂದು ದುಬೈನಿಂದ ಮುಂಬೈ ಮೂಲಕ ಭಟ್ಕಳಕ್ಕೆ ಬಂದಿದ್ದ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭಟ್ಕಳ ಪಟ್ಟಣದಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದೆ.

Leave A Reply

Your email address will not be published.