ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ.
ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ, ಮಲೆನಾಡು ಪ್ರದೇಶದ ಜನತೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜಧಾನಿ ಬೆಂಗಳೂರು, ಮಲೆನಾಡು ಸೇರಿಂದ ಕರಾವಳಿ ಭಾಗದಲ್ಲಿ ನಿನ್ನೆ ಮಳೆ ಸುರಿದಿದೆ. ಅದ್ರಲ್ಲೂ ಬೆಂಗಳೂರು, ಹಾಸನ ಮುಂತಾದ ಕಡೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ.