ಹಿರಿಯಡ್ಕದಲ್ಲಿ ಹಾಡುಹಗಲಲ್ಲೇ ಉದ್ಯಮಿಯ ಹತ್ಯೆ

0

ಉಡುಪಿ : ಹಾಡುಹಗಲಲ್ಲೇ ಉದ್ಯಮಿಯೋರ್ವರನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮಿ ಕಿಶನ್ ಹೆಗ್ಡೆ ಎಂಬವರೇ ಕೊಲೆಯಾದ ದುರ್ದೈವಿ. ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ತಂಡ ಕಿಶನ್ ಹೆಗ್ಡೆ ಅವರ ಕಾರನ್ನು ಅಡ್ಡಗಟ್ಟಿ ಹತ್ಯೆಗೈದಿದೆ.

ಘಟನೆಯಿಂದಾಗಿ ಹಿಡಿಯಡ್ಕದ ಜನತೆ ಬೆಚ್ಚಿ ಬಿದ್ದಿದ್ದಾರೆ. ಕಿಶನ್ ಹೆಗ್ಡೆ ಈ ಹಿಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು ಅದೇ ಹಿನ್ನೆಲೆಯಲ್ಲಿಯೇ ಈ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತ ಮೃತ ಕಿಶನ್ ಶೆಟ್ಟಿ ಮರಣೋತ್ತರ ಪರೀಕ್ಷೆಯನ್ನು ಮಣಿಪಾಲ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದ್ದು, ಹಿರಿಯಡ್ಕ ಠಾಣೆಯ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

https://youtu.be/bPsk7ec3B_o
Leave A Reply

Your email address will not be published.