ಹೈದ್ರಾಬಾದ್ : ಆಟೋ ರಿಕ್ಷಾ ಹಾಗೂ ಟಂಟೇನರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲಿ ಸಾವನ್ನಪ್ಪಿ, 15ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟ್ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಆಟೋ ಚಾಲಕ ಮಲ್ಲೇಶ್, ಪೆದ್ದಮ್ಮ, ನೋಮಲ ಸೈದಮ್ಮ ಕೊಟ್ಟಂ, ಇದ್ದಮ್ಮ, ಮಲ್ಲಮ್ಮ ಹಾಗೂ ಅಂಜನಮ್ಮ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 13 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
ಮೃತಪಟ್ಟವರು ಕೂಲಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿ ಒಂದೇ ಆಟೋದಲ್ಲಿ ಸುಮಾರು 20 ಮಂದಿ ಮನೆಗೆ ಪ್ರಯಾಣ ಮಾಡುತ್ತಿದ್ದ. ಈ ವೇಳೆಯಲ್ಲಿ ವೇಗವಾಗಿ ಬರುತ್ತಿದ್ದ ಕಂಟೈನರ್ ಲಾರಿ ಆಟೋಗೆ ಢಿಕ್ಕಿ ಹೊಡೆದಿದೆ. ಅಪಘಾತದ ನಡೆಯುತ್ತಿದ್ದಂತೆಯೇ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ನಲ್ಗೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದ ತನಿಖೆಯನ್ನು ನಡೆಸುತ್ತಿದ್ದಾರೆ.
Comments are closed.