ಮೈತ್ರಿ ಸರಕಾರದಲ್ಲಿ ನಾನು ಎಫ್ ಡಿಎ ಕ್ಲರ್ಕ್ : ಮೈತ್ರಿ ನೋವು ತೋಡಿಕೊಂಡ ಮಾಜಿ ಸಿಎಂ ಕುಮಾರಸ್ವಾಮಿ

ಬಾಗಲಕೋಟೆ : ಮೈತ್ರಿ ಸರಕಾರದಲ್ಲ ನಾನು ಎಫ್ ಡಿಎ ಕ್ಲರ್ಕ್ ಆಗಿದ್ದೆ. ನನಗೆ ಯಾವುದೇ ಸ್ವಾತಂತ್ರ್ಯವನ್ನು ನೀಡಿಲ್ಲ. ಸಿದ್ದರಾಮಯ್ಯ ಸದಾ ಒತ್ತಡ ಹೇರುತ್ತಿದ್ರು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಚ್.ಡಿ.ಕುಮಾರಸ್ವಾಮಿ, ಮತ್ತೊಮ್ಮೆ ಮೈತ್ರಿ ನೋವು ತೋಡಿಕೊಂಡಿದ್ದಾರೆ. ನಾನು ಸಿಎಂ ಆಗಿದ್ದರೂ ಕೂಡ ಸ್ವತಂತ್ರವಾಗಿ ಕೆಲಸ ಮಾಡಲು ಸಿದ್ದರಾಮಯ್ಯ ಬಿಡುತ್ತಿರಲಿಲ್ಲ. ಹಳೆಯ ನೀರಾವರಿ ಯೋಜನೆಯನ್ನು ಮುಂದುವರಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಡ ಹೇರುತ್ತಿದ್ರೆ, ರೈತರ ಸಾಲಮನ್ನಾ ಮಾಡುವಂತೆ ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದರು. ನಾನು ಮುಖ್ಯಮಂತ್ರಿಯಾಗಿದ್ದರೂ ಕೂಡ ತಾನು ಎಫ್ ಡಿಎ ಕ್ಲರ್ಕ್ ಆಗಿ ಕೆಲಸ ಮಾಡಿದ್ದೇನೆ ಎಂದಿದ್ದಾರೆ.

ಇನ್ನು ವಿಧಾನ ಪರಿಷತ್ ಸದಸ್ಯ ವಿಶ್ವನಾಥ್ ವಿರುದ್ದ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಅವರು ಸಾಹಿತಿ ಕೋಟದಲ್ಲಿ ಎಂಎಲ್ ಸಿ ಆಗಿದ್ದಾರೆ. ಈಗಾಗಲೇ ಎಲ್ಲಾ ಪಕ್ಷಕ್ಕೂ ಸೇರ್ಪಡೆಯಾಗಿದ್ದಾರೆ. ಮುಂದೆ ಯಾವ ಪಕ್ಷಕ್ಕೆ ಸೇರುತ್ತಾರೋ ಗೊತ್ತಿಲ್ಲ. ಜೆಡಿಎಸ್ ವಿರುದ್ದ ಆರೋಪ ಮಾಡಿದ್ದಾರೆ. ಇದೀಗ ಬಿಜೆಪಿ ವಿರುದ್ದವೂ ಆರೋಪಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

Comments are closed.