ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎತ್ತಂಗಡಿ : ಕಮಲ್ ಪಂತ್ ನೂತನ ಪೊಲೀಸ್ ಕಮಿಷನರ್

0

ಬೆಂಗಳೂರು : ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರಕಾರ ಎತ್ತಂಗಡಿ ಮಾಡಿದೆ. ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಭಾಸ್ಕರ್ ರಾವ್ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು. ಭಾಸ್ಕರ್ ರಾವ್ ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಒಂದಿಷ್ಟು ಕಾರ್ಯಕ್ರಮ ಗಳನ್ನು ಕೈಗೊಂಡಿದ್ದರು. ಇದೀಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತೆಯ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.

ಗುಪ್ತಚರದಳದ ಎಡಿಜಿಪಿಯಾಗಿದ್ದ ಕಮಲ್ ಪಂತ್ ಅವರ ಜಾಗಕ್ಕೆ ಬಿ.ದಯಾನಂದ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಗುಪ್ತಚರದಳದ ಮುಖ್ಯಸ್ಥರಾಗಿ ಬಿ.ದಯಾನಂದ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಕಮಿಷನರ್ ಆಗಿ ಕಮಲಪಂತ್ ಅವರು ಇಂದು ಸಂಜೆ ಅಧಿಕಾರವಹಿಸಿಕೊಳ್ಳಲಿದ್ದಾರೆ.

Leave A Reply

Your email address will not be published.