ರಾಜ್ಯದಲ್ಲಿಂದು ಬರೋಬ್ಬರಿ 84 ಮಂದಿಗೆ ಸೋಂಕು : ಕೊರೊನಾ ಪೀಡಿತರ ಸಂಖ್ಯೆ 1231ಕ್ಕೆ ಏರಿಕೆ

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಇಂದು ಒಂದೇ ದಿನ ಬರೋಬ್ಬರಿ 84 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 1231ಕ್ಕೆ ಏರಿಕೆಯಾಗಿದೆ.


ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 18 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೆ, ಸಕ್ಕರೆ ನಾಡು ಮಂಡ್ಯವನ್ನು ಕೊರೊನಾ ಬಿಡುವ ಸೂಚನೆ ಕಾಣಿಸುತ್ತಿಲ್ಲ. ಇಂದು ಮಂಡ್ಯದಲ್ಲಿ 17 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, 8 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಳಿದಂತೆ ರಾಯಚೂರು ಜಿಲ್ಲೆಯಲ್ಲಿ 6, ಕಲಬುರಗಿ 6, ವಿಜಯಪುರದಲ್ಲಿ 5, ಗದಗ 5, ಯಾದಗಿರಿ 5, ಹಾಸನ 4, ಕೊಪ್ಪಳ 3, ಬೆಳಗಾವಿ 2, ಬೀದರ್, ಕೊಡಗು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣ ಕಾಣಿಸಿಕೊಂಡಿದೆ.


ಡೆಡ್ಲಿ ಕೊರೊನಾಕ್ಕೆ ಇದುವರೆಗೆ ರಾಜ್ಯದಲ್ಲಿ 37 ಮಂದಿ ಬಲಿಯಾಗಿದ್ದರೆ, 521 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆದ್ರೆ ಸೋಮವಾರ ರಾಜ್ಯಕ್ಕೆ ಕೊರೊನಾ ಬಿಗ್ ಶಾಕ್ ಕೊಟ್ಟಿದ್ದು, ದಾಖಲೆಯ ಪ್ರಮಾಣದಲ್ಲಿ ಕೊರೊನಾ ಸೋಂಕು ಏರಿಕೆಯಾಗಿರುವುದು ಆತಂಕವನ್ನು ಮೂಡಿಸಿದೆ.

Leave A Reply

Your email address will not be published.