ಭಾನುವಾರ, ಏಪ್ರಿಲ್ 27, 2025
HomeBreakingRain Alert : ಜೂನ್ 7 ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ, 17 ಜಿಲ್ಲೆಗಳಲ್ಲಿ ಯೆಲ್ಲೋ...

Rain Alert : ಜೂನ್ 7 ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

- Advertisement -

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇಂದು ಕೇರಳ ಕರಾವಳಿಗೆ ನೈರುತ್ಯ ಮುಂಗಾರು ಮಾರುತಗಳು ಅಪ್ಪಳಿಸಲಿದ್ದು, ಕರ್ನಾಟಕಕ್ಕೆ ಜೂನ್‌ 5 ರಂದು ಮುಂಗಾರು ಆಗಮನ ದ ಸಾಧ್ಯತೆಯಿದೆ. ಕೇರಳಕ್ಕೆ ಮುಂಗಾರು ಆಗಮನದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್‌ 3 ಮತ್ತು 6ರವರೆಗೆ ವ್ಯಾಪಕ ಮಳೆಯಾಗಲಿದೆ. ಅಲ್ಲದೇ ಜೂನ್‌ 4ರವರೆಗೆ ಕರ್ನಾಟಕದ ಬೀದರ್‌, ಕಲಬುರಗಿ, ಬೆಂ.ಗ್ರಾಮಾಂತರ, ಬೆಂ.ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಯಚೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ‌.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular