ಬೆಂಗಳೂರಲ್ಲಿ ಮತ್ತೊಂದು ಸಿಲಿಂಡರ್‌ ಸ್ಪೋಟ : ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು : ದೇವರ ಚಿಕ್ಕನಹಳ್ಳಿಯಲ್ಲಿ ನಡೆದ ದುರಂತ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಬೆಂಗಳೂರಲ್ಲಿ ಮತ್ತೊಂದು ಸ್ಪೋಟ ಸಂಭವಿಸಿದೆ. ನಗರದ ಚಾಮರಾಜಪೇಟೆ ಯಲ್ಲಿ ಈ ದುರಂತ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಈ ದುರಂತ ಸಂಭವಿಸಿದ್ದು, ಈಗಾಗಲೇ ಮೂವರ ಮೃತದೇಹ ಪತ್ತೆಯಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಹತ್ತಕ್ಕೂ ಅಧಿಕ ಬೈಕುಗಳು ಸುಟ್ಟು ಕರಕಲಾಗಿದೆ. ಸಿಲಿಂಡರ್‌ ಸ್ಪೋಟದಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಘಟನೆಯಿಂದಾಗಿ ಸಿಲಿಕಾನ್‌ ಸಿಟಿಯ ಜನರು ಬೆಚ್ಚಿಬಿದ್ದಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ದೇವರಚಿಕ್ಕನಹಳ್ಳಿ ಬೆಂಕಿ ದುರಂತ ಸಂಭವಿಸಿ, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರು. ಇದೀಗ ಸಿಲಿಕಾನ್‌ ಸಿಟಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಯನ್ನು ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : ಆಶ್ರಿತ್‌ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ : ತಾಯಿ, ಮಗಳು ಸಜೀವ ದಹನ

ಇದನ್ನೂ ಓದಿ : ಹೈಟೆಕ್‌ ವೇಶ್ಯಾವಾಟಿಕೆ ಜಾಲ ಬಯಲು : ಸುರಂಗದಲ್ಲಿ ಅವಿತಿದ್ದರು ಸುಂದರಿಯರು

( Another cylinder blast in Nagarthapet Bangalore: Three die on the spot )

Comments are closed.