ಮಂಗಳವಾರ, ಜೂನ್ 17, 2025
HomeBreakingಎಡನೀರು ಮಠಾಧೀಶ ಕೇಶವಾನಂದ ಭಾರತೀ ಸ್ವಾಮೀಜಿ ವಿಧಿವಶ

ಎಡನೀರು ಮಠಾಧೀಶ ಕೇಶವಾನಂದ ಭಾರತೀ ಸ್ವಾಮೀಜಿ ವಿಧಿವಶ

- Advertisement -

ಕಾಸರಗೋಡು : ಎಡನೀರು ಮಠದ ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು ಭಾನುವಾರ ಮುಂಜಾನೆ ವಿಧಿವಶರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಕಾಸರಗೋಡಿನ ಎಡನೀರು ಮಠದಲ್ಲಿ ವಿಧಿವಶರಾದರು.

Alvas1

1960 ರಿಂದಲೂ ಜಗದ್ಗುರು ಶ್ರೀಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠಾಧಿಶರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಧಾರ್ಮಿಕ, ಶೈಕ್ಷಣಿಕ, ಯಕ್ಷಗಾನ, ಸಂಗೀತ, ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಸಮಗ್ರ ಅಭಿವೃದ್ದಿಗೆ ಕೊಟ್ಟ ಕೊಡುಗೆ ಅಪಾರವಾದದು. ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರ ಶ್ರಮದ ಫಲವಾಗಿಯೇ ಎಡನೀರು ಕನ್ನಡ ಸಂಸ್ಕೃತಿಯ ಕೇಂದ್ರವಾಗಿ ಗುರುತಿಸಲ್ಪಡುತ್ತಿದೆ. ಇಡೀ ದೇಶದ ಗಮನ ಸೆಳೆದ ಸಂಸ್ಥಾನವಾಗಿದೆ.

Maks Infotech Web1

ಇನ್ನು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಗಳ ಹೋರಾಟದ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಕುರಿತು ಕಾನೂನು ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ. ಭಾರತವೇ ಗುರುತಿಸುವ ಸುಪ್ರೀಂಕೋರ್ಟ್‌ನ ಕೇಶವಾನಂದ ಭಾರತೀ ವರ್ಸಸ್ ಕೇರಳ ರಾಜ್ಯ ಪ್ರಕರಣದ ತೀರ್ಪು, ಭಾರತೀಯ ಸಂವಿಧಾನದ ತಿದ್ದುಪಡಿಗಳ ಮೇಲಿನ ಇತಿಮಿತಿಗಳು ಹಾಗೂ ನಿಯಂತ್ರಣಕ್ಕೆ ಮಾರ್ಗದರ್ಶನವಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular