ಸೇತುವೆಗೆ ಕಾರ್ ಢಿಕ್ಕಿ : ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಸಾವು

ಕುಂದಾಪುರ : ಸೇತುವೆಗೆ ಕಾರು ಢಿಕ್ಕಿಯಾಗಿ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ವಾಪಾಸಾಗುತ್ತಿದ್ದರು. ಹಾಲಾಡಿ ಸೇತುವೆಯ ಬಳಿಗೆ ಬರುತ್ತಿದ್ದಂತೆಯೇ ಕಾರು ನಿಯಂತ್ರಣ ತಪ್ಪಿ ಸೇತುವೆಯ ಗೋಡೆಗೆ ಬಡಿದಿದೆ. ಇದರಿಂದಾಗಿ ರಾಜೀವ ಶೆಟ್ಟಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಹದ್ದೂರು ರಾಜೀವ ಶೆಟ್ಟಿ ಅವರನ್ನು ಮಣಿಪಾಲಕ್ಕೆ ಕರೆತರಲಾಯಿತಾದರೂ ಮಾರ್ಗ ಮಧ್ಯದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ.

ಕೆಎಂಎಫ್ ನಿರ್ದೇಶಕರಾಗಿರುವ ರಾಜೀವ ಶೆಟ್ಟಿ ಅವರು ಈ ಹಿಂದೆ ಶಂಕರನಾರಾಯಣ ತಾಲೂಕು ಪಂಚಾಯತ್ ಸದಸ್ಯರಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಶಂಕರನಾರಾಯಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.