ಪ್ರಶ್ನೆ ಪತ್ರಿಕೆ ಸೋರಿಕೆ : ನಾಲ್ವರು ಆರೋಪಿಗಳ ಬಂಧನ : 24 ಲಕ್ಷ ರೂಪಾಯಿ ವಶ

ಬೆಂಗಳೂರು : ಕೆಪಿಎಸ್ ಇ ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 24 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಪಿಎಸ್ ಇ ಇಂದಿನಿಂದಲೇ ಎಫ್ ಡಿಎ ಪರೀಕ್ಷೆಯನ್ನು ನಡೆಸುತ್ತಿದ್ದ ಜನವರು 23ರಂದು ಕನ್ನಡ ಪರೀಕ್ಷೆ ಹಾಗೂ ಜನವರಿ 24 ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಬೇಕಾಗಿತ್ತು. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಜ್ಞಾನಭಾರತಿ ಠಾಣೆಯ ಪೊಲೀಸರು ಉಳ್ಳಾಲದಲ್ಲಿ ಒಟ್ಟು 4 ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರರಿಂದ ಬರೋಬ್ಬರಿ 24 ಲಕ್ಷ ರೂಪಾಯಿ ಹಣ ಹಾಗೂ 3 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ವಿಚಾರಣೆಯನ್ನು ನಡೆಸಲಾಗುತ್ತಿದ್ದು, ಇನ್ನಷ್ಟು ಮಂದಿಯ ಬಂಧನವಾಗುವ ಸಾಧ್ಯತೆಯಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದ್ದಂತೆಯೇ ಕೆಪಿಎಸ್ ಎಫ್ ಡಿಎ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸುವುದಾಗಿ ಹೇಳಿದೆ.

https://kannada.newsnext.live/kpsc-paper-leak-exams-postpone-4-accused-arrest/

Comments are closed.