ಭಾನುವಾರ, ಜೂನ್ 15, 2025
HomeBreakingKSRTC ಬಸ್ ಕ್ರೂಸ್ರರ್ ನಡುವೆ ಭೀಕರ ಅಪಫಾತ : ಐವರ ದುರ್ಮರಣ, 7 ಮಂದಿ ಗಂಭೀರ

KSRTC ಬಸ್ ಕ್ರೂಸ್ರರ್ ನಡುವೆ ಭೀಕರ ಅಪಫಾತ : ಐವರ ದುರ್ಮರಣ, 7 ಮಂದಿ ಗಂಭೀರ

- Advertisement -

ಚಿತ್ರದುರ್ಗ: ಕೆಎಸ್ಆರ್ ಟಿಸಿ ಬಸ್ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಐವರು ಮೃತಪಟ್ಟು, 7 ಮಂದಿ ಗಂಭೀರವಾಗಿ ಗಾಯ ಗೊಂಡಿರುವ ಭೀಕರ ಘಟನೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ  ಬಿ.ಜಿ.ಕೆರೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ.

ತಿಮ್ಮಣ್ಣ(40 ವರ್ಷ), ರತ್ನಮ್ಮ(38 ವರ್ಷ), ಮಹೇಶ್(19ವರ್ಷ ) ದುರ್ಗಪ್ಪ(16ವರ್ಷ ) ಎಂಬವರೇ ಮೃತ ದುರ್ದೈವಿಗಳು. ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಲೂಸರ್ ಮತ್ತು ಬೆಂಗಳೂರಿನಿಂದ ಲಿಂಗಸುಗೂರಿನತ್ತ ತೆರಳುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ 7  ಮಂದಿಯನ್ನು  ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪ್ರಕರಣ ದಾಖಲು ಮಾಡಿಕೊಂಡಿರುವ ಮೊಳಕಾಲ್ಮೂರು ಠಾಣೆಯ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular