ಭಾನುವಾರ, ಏಪ್ರಿಲ್ 27, 2025
HomeBreakingಭಾರತದಲ್ಲಿ ಕೊರೊನಾ ಭೀತಿ, ಜಾರಿಯಾಗುತ್ತಾ ಲಾಕ್‌ಡೌನ್‌ ? ಸರಕಾರ ಮಾರ್ಗಸೂಚಿಯಲ್ಲೇನಿದೆ ?

ಭಾರತದಲ್ಲಿ ಕೊರೊನಾ ಭೀತಿ, ಜಾರಿಯಾಗುತ್ತಾ ಲಾಕ್‌ಡೌನ್‌ ? ಸರಕಾರ ಮಾರ್ಗಸೂಚಿಯಲ್ಲೇನಿದೆ ?

- Advertisement -

Lock down Fear India : ಭಾರತದಲ್ಲಿ ಮತ್ತೆ ಕೋವಿಡ್‌ ಆರ್ಭಟ ಜೋರಾಗಿದೆ. ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್‌ 19 ಹೊಸ ರೂಪಾಂತರ ಪತ್ತೆಯಾದ ಬೆನ್ನಲ್ಲೇ ಕೇಂದ್ರ ಸರಕಾರ ಹೊಸ ಕೋವಿಡ್‌ ಮಾರ್ಗಸೂಚಿ (Covid Guidelines ) ಯನ್ನು ಪ್ರಕಟಿಸಿದ್ದು, ರಾಜ್ಯ ಸರಕಾರಗಳು ಮಾರ್ಗಸೂಚಿ ಯನ್ನು ಕಟ್ಟಿನಿಟ್ಟಾಗಿ ಪಾಲನೆ ಮಾಡುವಂತೆ ಸೂಚನೆಯನ್ನು ನೀಡಿದೆ. ಈ ನಡುವಲ್ಲೇ ದೇಶದಲ್ಲಿ ಲಾಕ್‌ಡೌನ್‌ ಜಾರಿಯಾಗುತ್ತಾ ಅನ್ನೋ ಪ್ರಶ್ನೆ ಹಲವರನ್ನು ಕಾಡುತ್ತಿದೆ.

ಕೇರಳ ರಾಜ್ಯದಲ್ಲಿ ಹೊಸ ಕೋವಿಡ್-19 ವೇರಿಯಂಟ್ ಸೋಂಕು ಹೆಚ್ಚಳವಾಗುತ್ತಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇಂದ್ರ ಸರಕಾರ ಕಟ್ಟುನಿಟ್ಟಾದ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕರ್ನಾಟಕ ಸರಕಾರ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್‌ ಕಡ್ಡಾಯಗೊಳಿಸಿದೆ. ಅಲ್ಲದೇ ಅನಾರೋಗ್ಯ ಪೀಡಿತರು ಕೂಡ ಮಾಸ್ಕ್‌ ಧರಿಸುವಂತೆ ಸೂಚನೆಯನ್ನು ನೀಡಿದೆ.

Lock down Fear India Central Government Issued New Guidelines After Cases Rise
Image Credit to Original Source

ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯಲ್ಲೇನಿದೆ ?

  • ಮುಂಬರುವ ಹಬ್ಬ-ಹರಿದಿನಗಳ ಮೇಲೆ ನಿಗಾ ಇಡಬೇಕು.
  • ಕೊರೊನಾ ಹೆಚ್ಚುತ್ತಿರುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು.
  • ಚಿಕಿತ್ಸೆಗೆ ಅಗತ್ಯ ಸೌಲಭ್ಯಗಳನ್ನು ಸಿದ್ಧಪಡಿಸಬೇಕು.
  • ILI, SARI ಪ್ರಕರಣಗಳ ಮೇಲೆ ನಿಗಾ ಇಡಬೇಕು.
  • RTPCR ಕ್ಷಿಪ್ರ ಪರೀಕ್ಷೆಯನ್ನು ಪ್ರತಿ ಜಿಲ್ಲೆ ಮತ್ತು ನಗರದಲ್ಲಿ ಮಾಡಬೇಕು.
  • ಧನಾತ್ಮಕವಾಗಿದ್ದರೆ, ಮಾದರಿಯನ್ನು ಜೀನೋಮಿಕ್ ಅನುಕ್ರಮಕ್ಕಾಗಿ ಕಳುಹಿಸಬೇಕು.
  • ಕೋವಿಡ್-19 ನಿಯಮಗಳನ್ನು ಸ್ಥಳೀಯವಾಗಿ ಜಾರಿಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ : ಸುನಿಲ್‌ ಕುಮಾರ್‌ ಆರ್ಭಟಕ್ಕೆ ನಲುಗಿದ ಸರಕಾರ : ವಿಪಕ್ಷ ನಾಯಕನಾಗಿ ಎಡವಿದ್ರಾ ಆರ್‌.ಅಶೋಕ್‌ ?

ಭಾರತದಲ್ಲಿ JN.1 ರೂಪಾಂತರದ ಮೊದಲ ಪ್ರಕರಣವನ್ನು ಪತ್ತೆಹಚ್ಚಿದ ನಂತರ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಕೇಂದ್ರವು ರಾಜ್ಯಗಳಿಗೆ ಸಲಹೆ ನೀಡಿದೆ. ಭಾರತದಲ್ಲಿನ ಕೆಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇತ್ತೀಚಿನ ಕೋವಿಡ್-19 ಪ್ರಕರಣಗಳ ಹೆಚ್ಚಳ ಮತ್ತು ದೇಶದಲ್ಲಿ ಕೋವಿಡ್-19 ರ ಹೊಸ ಜೆಎನ್.1 ರೂಪಾಂತರದ ಮೊದಲ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಸುಧಾಂಶ್ ಪಂತ್ ಅವರು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಕೋವಿಡ್‌ ಸೋಂಕಿನ ವಿರುದ್ದ ಎಚ್ಚರಿಕೆಯಿಂದ ಇರುವಂತೆ ರಾಜ್ಯ ಹಾಗೂ ಕೇಂದ್ರಾಳಿತ ಪ್ರದೇಶಗಳ ಸರಕಾರಗಳಿಗೆಪತ್ರವನ್ನು ಬರೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಯೋಗದ ಪ್ರಯತ್ನದಿಂದ ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. COVID-19 ವೈರಸ್ ಇನ್ನೂ ಹರಡುತ್ತಿದೆ. ಭಾರತೀಯ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕವಾಗಿ ಆರೋಗ್ಯ ಸವಾಲುಗಳನ್ನು ಎದುರಿಸುವುದು ಸರಕಾರಗಳಿಗೆ ಸವಾಲಿನ ಕೆಲಸವಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಕೋವಿಡ್‌ ಆತಂಕ : 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ

Lock down Fear India Central Government Issued New Guidelines After Cases Rise
Image Credit to Original Source

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಭಾರತದಲ್ಲಿ ಸೋಮವಾರ 260 ಹೊಸ ಕರೋನಾ ವೈರಸ್ ಸೋಂಕಿತ ಪ್ರಕರಣ ದಾಖಲಾಗಿದೆ. ಅಲ್ಲದೇ ಸಕ್ರಿಯ ಪ್ರಕರಣಗಳ ಸಂಖ್ಯೆ 1,828 ಕ್ಕೆ ಏರಿಕೆ ಕಂಡಿದೆ. ಕೇರಳ ರಾಜ್ಯದಲ್ಲಿ ಕೋವಿಡ್‌ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, 4 ಮಂದಿ ಕೋವಿಡ್‌ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಆರೋಗ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ರಾಜ್ಯ ಸರಕಾರ ಸೂಚನೆಯನ್ನು ನೀಡಿದೆ.

ಇದನ್ನೂ ಓದಿ : ಅಯ್ಯಪ್ಪ ಭಕ್ತರಿಗೆ ಗುಡ್‌ನ್ಯೂಸ್‌ : ಶಬರಿಮಲೆಯಲ್ಲಿ ದೇವರ ದರ್ಶನ ಅವಧಿ 1 ಗಂಟೆ ಹೆಚ್ಚಳ, ನೂಕುನುಗ್ಗಲು ನಿಯಂತ್ರಣ

ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಜಿಲ್ಲಾವಾರು ಆಧಾರದ ಮೇಲೆ ಇನ್ಫ್ಲುಯೆನ್ಸ ತರಹದ ಅನಾರೋಗ್ಯ (ILI) ಮತ್ತು ತೀವ್ರವಾದ ಉಸಿರಾಟದ ಕಾಯಿಲೆ (SARI) ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ವರದಿ ಮಾಡಲು ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರಕರಣಗಳಲ್ಲಿ ಯಾವುದೇ ಆರಂಭಿಕ ಮೇಲ್ಮುಖ ಪ್ರವೃತ್ತಿಯನ್ನು ಪತ್ತೆಹಚ್ಚಲು ಇಂಟಿಗ್ರೇಟೆಡ್ ಹೆಲ್ತ್ ಇನ್ಫಾರ್ಮೇಶನ್ ಪ್ಲಾಟ್‌ಫಾರ್ಮ್ (IHIP) ಪೋರ್ಟಲ್‌ನಲ್ಲಿ ಈ ಡೇಟಾವನ್ನು ನಿಯಮಿತವಾಗಿ ನವೀಕರಿಸಬೇಕು.

RT-PCR ಮತ್ತು ಪ್ರತಿಜನಕ ಪರೀಕ್ಷೆಗಳ ಶಿಫಾರಸ್ಸು ದರವನ್ನು ನಿರ್ವಹಿಸುವ ಮೂಲಕ ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ -19 ಪರೀಕ್ಷಾ ಮಾರ್ಗಸೂಚಿಗಳ ಪ್ರಕಾರ ಸಾಕಷ್ಟು ಪರೀಕ್ಷೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರವು ರಾಜ್ಯಗಳನ್ನು ಕೇಳಿದೆ. RT-PCR ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಭಾರತೀಯ SARS COV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ಪ್ರಯೋಗಾಲಯಗಳಿಗೆ ಜೀನೋಮ್ ಅನುಕ್ರಮಕ್ಕಾಗಿ ಧನಾತ್ಮಕ ಮಾದರಿಗಳನ್ನು ಕಳುಹಿಸಲು ಕೇಳಲಾಗಿದೆ.

Lock down Fear India Central Government Issued New Guidelines After Cases Rise

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular